ರಸ್ತೆ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ: ಮುಖ್ಯ ಆಯುಕ್ತರು

ರಸ್ತೆ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ: ಮುಖ್ಯ ಆಯುಕ್ತರು

ಬೆಂಗಳೂರು ಜೂ 03 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದ್ದು, ಮಾನ್ಯ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್ ರವರು ಇಂದು ನಗರದ ಪ್ರಮುಖ ರಸ್ತೆಗಳಲ್ಲಿ ರಸ್ತೆಗುಂಡಿ ಮುಚ್ಚುವ ಕಾರ್ಯವನ್ನು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪಶ್ಚಿಮ ವಲಯ ವ್ಯಾಪ್ತಿಯ ಕಾವೇರಿ ಚಿತ್ರಮಂದಿರ ಜಂಕ್ಷನ್ ಬಳಿಯಿಂದ ಚೌಡಯ್ಯ ರಸ್ತೆ(ಸ್ಯಾಂಕಿ ಟ್ಯಾಂಕ್)ಯಲ್ಲಿ ರಸ್ತೆ ಕತ್ತರಿಸುವಿಕೆ ಭಾಗಕ್ಕೆ ಡಾಂಬರೀಕರಣ ಹಾಕಲಾಗುತ್ತಿದ್ದು, ವಾಹನ ಸಂಚಾರಕ್ಕೆ ಯಾವುದೇ ಸಮಸ್ಯೆ ಆಗದಂತೆ ಗುಣಮಟ್ಟವಾಗಿ ಡಾಂಬರೀಕರಣ ಮಾಡಲು ಮುಖ್ಯ ಆಯುಕ್ತರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ದಾಸರಹಳ್ಳಿ ವಲಯ ಜಾಲಹಳ್ಳಿ ರಸ್ತೆಯಿಂದ ಕಂಠೀರವ ಸ್ಟುಡಿಯೋ ಕಡೆ ಹೋಗುವ ಟಿ.ವಿ.ಎಸ್ ರಸ್ತೆಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ನಡೆಯುತ್ತಿದ್ದು, ಆರ್.ಆರ್.ನಗರ ವಲಯ ವ್ಯಾಪ್ತಿಯ ಪೀಣ್ಯ ಒಳ ವರ್ತುಲ ರಸ್ತೆ ರಾಜ್ ಕುಮಾರ್ ಸಮಾದಿ ಬಳಿ ರಸ್ತೆ ಗುಂಡಿ ಮುಚ್ಚುವ ಕಾರ್ಯವನ್ನು ಪರಿಶೀಲನೆ ಮಾಡಿದ ವೇಳೆ ಬೆಸ್ಕಾಂ ವಿದ್ಯುತ್ ತಂತಿ ನೆಲದಡಿ ಅಳವಡಿಸಿರುವ ಪೈಪ್ ಹಾಗೂ ಜಲಮಂಡಳಿ ವತಿಯಿಂದ ಮಾಡಿರುವ ಒಳ ಚರಂಡಿ ಕಾರ್ಯವು ಅವೈಜ್ಞಾನಿಕವಾಗಿದ್ದು, ಇದರಿಂದ ವಾಹನ ಸವಾರರಿಗೆ ಸಮಸ್ಯೆಯಾಗಲಿದೆ. ಈ ಸಂಬಂಧ ಸಂಬಂಧ ಅಧಿಕಾರಿಗಳ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು‌‌.

ಈ ವೇಳೆ ವಲಯ ಜಂಟಿ ಆಯುಕ್ತರುಗಳು, ಮುಖ್ಯ ಅಭಿಯಂತರರು,  ರಸ್ತೆ ಮೂಲಭೂತ ಸೌಕರ್ಯ ವಿಭಾಗದ ಮುಖ್ಯ ಅಭಿಯಂತರರಾದ ಪ್ರಹ್ಲಾದ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Related