ನಾಡಗೀತೆಗೆ ಅವಮಾನ..!!

ನಾಡಗೀತೆಗೆ ಅವಮಾನ..!!

ಈ ವೇಳೆ ಮಾತನಾಡಿದ ಕರವೇ ಅಧ್ಯಕ್ಷ ಶಿವರಾಮೇಗೌಡರು, ರೋಹಿತ್ ಚಕ್ರತೀರ್ಥ ಒಬ್ಬ ನಾಡ ದ್ರೋಹಿ ಮಾತ್ರ ಅಲ್ಲ ದೇಶ ದ್ರೋಹಿ ಕೂಡ. ಇಂದು ನಾಡಗೀತೆಗೆ ಅವಮಾನ ಮಾಡಿದವನು ನಾಳೆ ರಾಷ್ಟ್ರ ಗೀತೆ ಅವಮಾನ ಮಾಡಲ್ಲಾ ಅಂತ ಯಾವ ಗ್ಯಾರಂಟಿ ಎಂದು ಕಿಡಿಕಾರಿದರು.

ಪಠ್ಯ ಪರಿಷ್ಕರಣಾ ಸಮಿತಿಯ ಅಧ್ಯಕ್ಷರಾಗಿರುವ ರೋಹಿತ್ ಚಕ್ರತೀರ್ಥ ಅವರ ಹಳೆಯ ಫೇಸ್ ಬುಕ್ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಪೋಸ್ಟ್ ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಇಂದು ರೋಹಿತ್ ಚಕ್ರವರ್ತಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡ  ಬಣದಿಂದ ಬೃಹತ್ ಪ್ರತಿಭಟನೆ ನಡೆಸಲಾಯ್ತು. ಮಲ್ಲೇಶ್ವರದ ಕುವೆಂಪು ಕಂಚಿನ ಪ್ರತಿಮೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.

 

ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿ  ತಮಗಿಷ್ಟ ಬಂದಂತೆ ವಿಷಯ ತುಂಬಲಾಗಿದೆ. ರಾಷ್ಟ್ರ ಕವಿ ಕುವೆಂಪು ರವರು ರಚಿಸಿರುವ ನಾಡಗೀತೆ ವ್ಯಂಗ್ಯಮಾಡಿ ಅವಹೇಳನ ಮಾಡಲಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದರು. ಇದೇ ವೇಳೆ ರೋಹಿತ್ ಚಕ್ರತೀರ್ಥ ಅವರ ಪ್ರತಿಕೃತಿಗೆ ಚಪ್ಪಲಿ ಹಾರ ಹಾಕಿ ದಹನ ಮಾಡಲಾಯ್ತು. ಪೊಲೀಸರು ರೋಹಿತ್ ಚಕ್ರತೀರ್ಥ ವಿರುದ್ಧ ಪ್ರಕರಣ ದಾಖಲಿಸಿಕೊಂಡು  ಬಂಧಿಸಬೇಕು ಎಂದು ಆಗ್ರಹಿಸಲಾಯ್ತು.

Related