ರೌಡಿಯ ಬರ್ಬರ ಹತ್ಯೆ..!

ರೌಡಿಯ ಬರ್ಬರ ಹತ್ಯೆ..!

ಬೆಂಗಳೂರು, ಫೆ.16 : ಇತ್ತೀಚೆಗೆ ಜೈಲಿನಿಂದ ಹೊರಗೆ ಬಂದಿದ್ದ ರೌಡಿಯನ್ನು ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ನಡು ರಸ್ತೆಯಲ್ಲೇ ಕೊಚ್ಚಿ ಕೊಲೆ ಮಾಡಿರುವ ಘಟನೆ ಕೆ.ಜಿ.ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
11.30ರ ಸಂದರ್ಭದಲ್ಲಿ ಬಿಎಂ ಲೌಟ್ನ ಬಳಿ ಎದುರಾಳಿ ತಂಡ ಮಾರಕಾಸ್ತ್ರಗಳಿಂದ ರೌಡಿ ಶೀಟರ್ ತಬರೇಜ್ನನ್ನು ಕೊಚ್ಚಿ ಕೊಂದಿದೆ.ಕೊಲೆ ಯತ್ನ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಈತ ಕೆ.ಜೆ.ಹಳ್ಳಿ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ಆಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Related