ಹುಬ್ಬಳ್ಳಿ : ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಬಗ್ಗೆ ರವಿವಾರ ಅಂತಿಮಗೊಳಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ರಾಮಲಿಂಗ ರೆಡ್ಡಿ ನೈತೃತ್ವದಲ್ಲಿ ಸಮಿತಿ ಮಾಡಿದ್ದೇವೆ. ಅವರ ವರದಿ ಮೇಲೆ ನಾಳೆ ಫೈನಲ್ ಮಾಡುತ್ತೇವೆ. ಈಗಾಗಲೇ ಬಹಳಷ್ಟು ಜನ ಆರ್ಜಿ ಸಲ್ಲಿಸಿದ್ದಾರೆ. ಈ ಬಗ್ಗೆ ಸಭೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.