ಎಸ್. ಸಿ ಪರಿಶಿಷ್ಟ ಜಾತಿ ಕೈಬಿಡಲು ಆಗ್ರಹ

ಎಸ್. ಸಿ ಪರಿಶಿಷ್ಟ ಜಾತಿ ಕೈಬಿಡಲು ಆಗ್ರಹ

ಸಿರವಾರ : ಪರಿಶಿಷ್ಟ ಜಾತಿ ಪಟ್ಟಿಯಿಂದ ಸ್ಪೃಶ್ಯ ಜಾತಿಗಳಾದ ಬಂಜಾರ, ಭೋವಿ, ವಡ್ಡರ್, ಲಂಬಾಣಿ ಹಾಗೂ ಕೊರಮ, ಕೊರಚ ಜಾತಿಗಳನ್ನು ಕೈಬಿಡುವಂತೆ ಆಗ್ರಹಿಸಿ.

ಕರ್ನಾಟಕ ಅಸ್ಪೃಶ್ಯ ಸಮುದಾಯಗಳ ಮಹಾಸಭಾದಿಂದ ತಾಲೂಕಿನ ವಿವಿಧ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಹಾಗೂ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬರೆದ ಮನವಿ ಪತ್ರವನ್ನು ಸಲ್ಲಿಸುವ ಮೂಲಕ ಒತ್ತಾಯಿಸಿದ್ದರು.

ರಾಜ್ಯ ಸರ್ಕಾರವು ಈ ಚಾರಿತ್ರಿಕ ಜವಾಬ್ದಾರಿಯನ್ನು ಈ ಕೂಡಲೇ ನೆರವೇರಿಸುವ ಮೂಲಕ ಪರಿಶಿಷ್ಟ ಜಾತಿಯ ಶೇ.15 ರ ಮೀಸಲಾತಿಯಲ್ಲಾದ ವಿದ್ಯೆ, ಉದ್ಯೋಗ ಹಾಗೂ ರಾಜಕೀಯ ಪ್ರಾತಿನಿಧ್ಯದ ಶೇ.50ರ ನಷ್ಟವನ್ನು ಸರಿಪಡಿಸುವ ಅಗತ್ಯವಿದೆ.

ಈ ವಾಸ್ತವ ಸ್ಥಿತಿಯನ್ನು ಮತ್ತೊಮ್ಮೆ ಮುಖ್ಯಮಂತ್ರಿಗಳಿಗೆ ನೆನಪಿಸುತ್ತಿದ್ದು ಈ ಹಿನ್ನಲೆಯಲ್ಲಿ ಇಡೀ ರಾಜಾದ್ಯಾಂತ ಅಸ್ಪೃಶ್ಯ ಸಮುದಾಯಗಳ ಮಹಾಸಭಾ ಸಾಂಕೇತಿಕವಾಗಿ ಹಮ್ಮಿಕೊಂಡಿರುವ ಈ ಪ್ರತಿಭಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕೆಂದು ಅವರು ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದರು.
.

Related