ಬೆಂಗಳೂರು: ಕಾರ್ತಿಕ ಮಾಸದ ಕಡೆ ಸೋಮವಾರದ ಪ್ರಯುಕ್ತ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ ಸತೀಶ್ ರೆಡ್ಡಿ ಅವರು ಇಂದು (ಡಿ. 11 ಸೋಮವಾರ) ಬೇಗೂರು ಗ್ರಾಮದ ಐತಿಹಾಸಿಕ ಪ್ರಸಿದ್ಧ ಪಾರ್ವತಿ ಸಮೇತ ಶ್ರೀ ನಾಗೇಶ್ವರ ಸ್ವಾಮಿ ದೇವಸ್ಥಾಕ್ಕೆ ಕುಟುಂಬ ಸಮೇತ ವಿಶೇಷ ಪೂಜೆ ಸಲ್ಲಿಸಿದರು.
ಇನ್ನು ಈ ಸಂದರ್ಭದಲ್ಲಿ ದೇವಸ್ಥಾನದ ಅನ್ನದಾಸೋಹ ಭವನವನ್ನು ಉದ್ಘಾಟನೆಯನ್ನು ಶಾಸಕ ಸತೀಶ್ ರೆಡ್ಡಿ ಅವರು ನೆರವೇರಿಸಿದರು.
ಇನ್ನು ಪೂಜೆ ಬಳಿಕ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಸರ್ವರಿಗೂ ಈಶ್ವರನ ಅನುಗ್ರಹ ದೊರೆಯಲಿ ಎಂದು ಕೇಳಿಕೊಳ್ಳುತ್ತೇನೆ ಎಂದರು.
ಈ ಸಂದರ್ಬದಲ್ಲಿ ಬಿಜೆಪಿ ಮುಖಂಡರಾದ ಶ್ರೀನಿವಾಸ ರೆಡ್ಡಿ, ನಾಗೇಶ್ವರ ದೇವಸ್ಥಾನದ ಅಧ್ಯಕ್ಷರಾದ ಶ್ರೀನಿವಾಸ, ಗ್ರಾಮದ ಮುಖಂಡರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.