ಬೆಂಗಳೂರು : ಬುಧವಾರ ಸಂಜೆ ಸುಮಾರು 6 ಘಂಟೆ ಹೊತ್ತಿಗೆ ಎರಡು ವರ್ಷದ ಬಾಲಕ ತೆರೆದ ಬಾವಿಗೆ ಬಿದ್ದು ಸಾವು ಬದುಕಿನ ಮಧ್ಯ ಹೋರಾಡಿ ಸತತ 18 ಗಂಟೆಗಳ ನಂತರ ತನ್ನ ಜೀವವನ್ನು ಗೆದ್ದುಕೊಂಡು ಬಂದಿರುವ ಸಾತ್ವಿಕ್ ಈಗ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನು ಪಡೆಯುತ್ತಿದೆ.
ಇನ್ನು ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡುವ ಮೂಲಕ, ಜನತೆ ಇನ್ನಾದರೂ ಕೊಳವೆ ಬಾವಿಯ ಬಗ್ಗೆ ಎಚ್ಚೆತ್ತುಕೊಳ್ಳಬೇಕು ಇಲ್ಲದಿದ್ದರೆ ಇಂಥ ಚಿಕ್ಕ ಮಕ್ಕಳು ತಮ್ಮ ಪ್ರಾಣಕ್ಕೆ ಅಪಾಯ ತಂದುಕೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.
ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್ನ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ. ಮಗುವಿನ ರಕ್ಷಣೆಗಾಗಿ ಹಗಲಿರುಳೆನ್ನದೆ ಶ್ರಮಿಸಿದ ಸಿಬ್ಬಂದಿಗಳು ಮತ್ತು ಸಾರ್ವಜನಿಕರ ಕಾರ್ಯದಕ್ಷತೆ ಪ್ರಶಂಸನೀಯ.
ಮಗುವಿನ ಕುಟುಂಬದವರ, ನಾಡಿನ ಕೋಟ್ಯಂತರ ಜನರ ಹರಕೆ – ಹಾರೈಕೆಗಳು ಫಲಿಸಿದೆ, ಸಾವನ್ನೇ ಗೆದ್ದು ಬಂದ ಪುಟ್ಟ ಕಂದಮ್ಮ ಮತ್ತೆ ಪೋಷಕರ ಮಡಿಲು ಸೇರಿದ್ದು ಕಂಡು ಖುಷಿಯಾಯಿತು ಎಂದು ಹೇಳಿದ್ದಾರೆ.
ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್ನ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ. ಮಗುವಿನ ರಕ್ಷಣೆಗಾಗಿ ಹಗಲಿರುಳೆನ್ನದೆ ಶ್ರಮಿಸಿದ ಸಿಬ್ಬಂದಿಗಳು ಮತ್ತು ಸಾರ್ವಜನಿಕರ ಕಾರ್ಯದಕ್ಷತೆ ಪ್ರಶಂಸನೀಯ.
ಮಗುವಿನ ಕುಟುಂಬದವರ, ನಾಡಿನ ಕೋಟ್ಯಂತರ ಜನರ ಹರಕೆ -…
— Siddaramaiah (@siddaramaiah) April 4, 2024