ಪಿಎಸ್ಐ ಪ್ರಕರಣದಲ್ಲಿ ಮತ್ತೊಬ್ಬ ವ್ಯಕ್ತಿ ಸಿಬಿಐ ವಶ..!!

ಮೇ 14ರಂದು ಜಮಖಂಡಿ ನಗರದಲ್ಲಿ ಶ್ರೀಕಾಂತ್ನ ಮದುವೆ ಅದ್ದೂರಿಯಾಗಿ ನೆರವೇರಿತ್ತು. ಇದಾದ 5 ದಿನಗಳ ಬಳಿಕ ಸಿಐಡಿ ಪೊಲೀಸರು ಈತನನ್ನು ವಶಕ್ಕೆ ಪಡೆದಿದ್ದಾರೆ. ಮದುವೆ ಬಳಿಕ ಮೊದಲ ಬಾರಿಗೆ ಮನೆ ದೇವರ ದರ್ಶನಕ್ಕೆಂದು ಹೋಗಿದ್ದ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಬಾಗಲಕೋಟೆ: ಪಿಎಸ್ಐ ನೇಮಕಾತಿ ಹಗರಣ ಬಗೆದಷ್ಟು ಬಯಲಾಗುತ್ತಿದೆ. ಈ ಬಗ್ಗೆ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ರಾಜ್ಯದ ಮೂಲೆ ಮೂಲೆಯಿಂದ ಶಂಕಿತ ಆರೋಪಿಗಳನ್ನ ಹೊರ ತರುತ್ತಿದ್ದಾರೆ. ಇದೀಗ ಬಾಗಲಕೋಟೆಯಲ್ಲಿ ಮದುವೆಯಾಗಿ ಪತ್ನಿಯನ್ನು ಮನೆಗೆ ಕರೆದುಕೊಂಡು ಬರುವ ಸಂಭ್ರಮದಲ್ಲಿ ಇದ್ದ ನವವಿವಾಹಿತನಿಗೆ ಸಿಐಡಿ ಅಧಿಕಾರಿಗಳು ಶಾಕ್ (Shock) ನೀಡಿದ್ದಾರೆ. ಶ್ರೀಕಾಂತ್ ಚೌರಿ ಎಂಬಾತನೇ ಬಂಧಿತ ಆರೋಪಿ ಅಂತ ತಿಳಿದು ಬಂದಿದೆ.

Related