ತೇಜಸ್ವಿ ಸೂರ್ಯ ಅವರ ಅಭಿವೃದ್ಧಿ ಕಾರ್ಯ ನೋಡಿ ಮತ ನೀಡಿ

ತೇಜಸ್ವಿ ಸೂರ್ಯ ಅವರ ಅಭಿವೃದ್ಧಿ ಕಾರ್ಯ ನೋಡಿ ಮತ ನೀಡಿ

ಬೊಮ್ಮನಹಳ್ಳಿ: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಅರಿಕೆರೆ ವಾರ್ಡಿನ ಬಿಜೆಪಿ ಅಧ್ಯಕ್ಷರಾದ ಮಂಜುನಾಥ್ ಅವರ ನೇತೃತ್ವದಲ್ಲಿ ಇಂದು (ಭಾನುವಾರ ಏಪ್ರಿಲ್ 21) ರಂದು ಹಲವಾರು ಬಡಾವಣೆಗಳಲ್ಲಿ ಮನೆ ಮನೆಗೆ ತೆರಳಿ ತೇಜಸ್ವಿ ಸೂರ್ಯ ಅವರ ಪರವಾಗಿ ಮತಯಾಚನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಂಜುನಾಥ್ ಅವರ ಮಾತನಾಡಿ, ಶಾಸಕ ಸತೀಶ್ ರೆಡ್ಡಿ ಅವರ ಅಭಿವೃದ್ಧಿ ಕಾರ್ಯಗಳು ಹಾಗೂ ತೇಜಸ್ವಿ ಸೂರ್ಯ ಅವರ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಮತ್ತೊಮ್ಮೆ ಈ ದೇಶಕ್ಕೆ  ನರೇಂದ್ರ ಮೋದಿಯವರು ಪ್ರಧಾನಿ ಆಗಲೇಬೇಕೆಂದು ಪ್ರತಿಯೊಬ್ಬರು ಏಪ್ರಿಲ್ 26ರಂದು ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿ ತೇಜಸ್ವಿ ಸೂರ್ಯ ಅವರನ್ನು ಗೆಲ್ಲಿಸುವ ಮೂಲಕ ಭಾರತ ದೇಶಕ್ಕೆ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಬಿಜೆಪಿಯ ಸಾವಿರಾರು ಕಾರ್ಯಕರ್ತರು ಬಾಕಿಯಾಗಿ ಮತಯಾಚನೆ ಮಾಡಿದರು.

Related