ನಾಯಕರ ಸ್ವಪ್ರತಿಷ್ಠೆಗಳಿಂದ ಸೋಲಿಗೆ ಕಾರಣವಾಯಿತು: ಸಚಿವ ಮುನಿಯಪ್ಪ

ನಾಯಕರ ಸ್ವಪ್ರತಿಷ್ಠೆಗಳಿಂದ ಸೋಲಿಗೆ ಕಾರಣವಾಯಿತು: ಸಚಿವ ಮುನಿಯಪ್ಪ

ಬೆಂಗಳೂರು: ನಾವು ನಿರೀಕ್ಷೆ ಮಾಡಿದಷ್ಠು ಸ್ಥಾನಗಳನ್ನು ಪಡೆಯುವಲ್ಲಿ ನಾವು ವಿಫಲ ವಾಗಿದ್ದೇವೆ. ಆದರೆ ಕಳೆದ 2019ರ ಚುನಾವಣೆಗೆ ಹೋಲಿಸಿದರೆ ನಮ್ಮ ಪಕ್ಷ ದೇಶದಾದ್ಯಂತ ಉತ್ತಮ ಸ್ಥಾನ ಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಸಚಿವ ಮುನಿಯಪ್ಪ ಅವರು ಹೇಳಿದ್ದಾರೆ.

ನಗರದಲ್ಲಿ ಇಂದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ನಮ್ಮ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿಯವರು ಬಡವರ ಪರವಾದ ಪ್ರಣಾಳಿಕೆಯನ್ನು ಘೋಷಿಸಿದ್ದರು. ಅದರ ಪ್ರತೀಕವಾಗಿ ನಾವು ಉತ್ತರ ಭಾರತದ ರಾಜ್ಯಗಳಲ್ಲಿ ಹಲವು ಸ್ಥಾನ ಗಳನ್ನು ಗೆದ್ದಿದ್ದು, ದಕ್ಷಣ ಭಾರತದ ರಾಜ್ಯಗಳ ಕಡೆ ಮಿಶ್ರ ಫಲಿತಾಂಶ ಬಂದಿರುವುದರಿಂದ ನಮಗೆ ಸ್ವಲ್ಪ ಹಿನ್ನಡೆಯಾಗಿದೆ ಎಂದರು.

ಕೋಲಾರ ಜಿಲ್ಲೆಯಲ್ಲಿ ನಾಯಕರ ಒಗ್ಗಟ್ಟಿನ ಕೊರತೆಯಿಂದಾಗಿ ನಾವು ಕೋಲಾರ ಕ್ಷೇತ್ರವನ್ನು ಗೆಲ್ಲುವಲ್ಲಿ ವಿಫಲವಾಗಿದ್ದೇವೆ. ನಾನು ಹಲವಾರು ಬಾರಿ ಹೈಕಮಾಂಡ್ ನಾಯಕರು ಹಾಗೂ ರಾಜ್ಯ ನಾಯಕರ ಗಮನಕ್ಕೆ ತಂದರು ಸಹ ಈ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಾಗಲಿಲ್ಲ. ಕೋಲಾರ ಜಿಲ್ಲೆಯಲ್ಲಿ ಶಾಸಕರ ಒಗ್ಗಟ್ಟಿನ ಕೊರತೆ ಹಾಗೂ ಶಾಸಕರ ಸ್ವಪ್ರತಿಷ್ಠೆಗಳ ಕಾರಣ ದಿಂದಾಗಿ ನಾವು ಕೋಲಾರ, ಚಿಕ್ಕಬಳ್ಳಾಪುರ ಕ್ಷೇತ್ರಗಳ ಸೋಲಿಗೆ ಕಾರಣವಾಯಿತು ಎಂದರು. ಇದನ್ನೂ ಓದಿ:ಶಾಕಿಂಗ್ ಸುದ್ದಿ ಕೊಟ್ಟ ಟೀಂ ಇಂಡಿಯಾ ಆಟಗಾರ..!

ಕೋಲಾರದಲ್ಲಿ ಈಗಲೂ ಕಾಲ ಮಿಂಚಿಲ್ಲಾ ಮುಂಬರುವ ತಾಲ್ಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿ ಸ್ಥಾನಗಳನ್ನು ಗೆಲ್ಲಬೇಕಾದರೆ ನಾವೆಲ್ಲಾರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ನಾನು ಮೊದಲಿನಿಂದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿಕೆ.ಶಿವಕುಮಾರ್ ರವರ ಗಮನಕ್ಕೆ ತಂದಿದ್ದು, ಅವರು ಕೋಲಾರದ  ಸಮಸ್ಯೆಯನ್ನು ಬಗೆಹರಿಸಿದ್ದರೆ ಅಲ್ಲಿ ನಮಗೆ ಸೋಲಾಗುತ್ತಿರಲಿಲ್ಲ, ಅಲ್ಲಿನ ನಾಯಕರಿಗೆ ಈಗಲಾದರು ಬುದ್ದಿಹೇಳಿ ಸರಿ ಮಾಡಲಿ ಎಂದರು.

ರಾಜ್ಯದಲ್ಲಿ ಎಲ್ಲಾ ಕಡೆ ನಮ್ಮ ಸಚಿವರು ಉತ್ತಮ ಕೆಲಸ ಮಾಡಿದ್ದಾರೆ. ನಮಗೆ ಮತದಾನದ ಪ್ರಮಾಣದಲ್ಲಿ ಕಡಿಮೆಯಾಗಿಲ್ಲಾ ನಮ್ಮ ಕಾಂಗ್ರೆಸ್ ಪಕ್ಷದ ಮತಗಳು ಹೆಚ್ಚಾಗಿಯೇ ಬಂದಿದೆ ಆದರೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಹೊಂದಾಣಿಕೆಯಿಂದಾಗಿ ಅವರ ಗೆಲುವಿಗೆ ಸುಲಭವಾಗಿದೆ.

ಮುಖ್ಯಮಂತ್ರಿ ಹಾಗೂ ಅಧ್ಯಕ್ಷರು ಎಲ್ಲಾರೂ ಪ್ರಚಾರದ ಸಂದರ್ಭದಲ್ಲಿ ಉತ್ತಮವಾದ ಗೆಲುವಿನ ವಾತಾವರಣ ನಿರ್ಮಿಸಿದ್ದರು. ಆದರೆ ಈ ಫಲಿತಾಂಶಗಳು ನಮಗೆ ಗೊಂದಲ ವನ್ನು ಉಂಟುಮಾಡುತ್ತಿವೆ ಎಂದರು.

 

Related