ಶಿರಡಿ ಸಾಯಿಬಾಬನ ದರ್ಶನ ಪಡೆದ ಸಿಎಂ

ಶಿರಡಿ ಸಾಯಿಬಾಬನ ದರ್ಶನ ಪಡೆದ ಸಿಎಂ

ಶಿರಡಿ: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ಭಾನುವಾರದಂದು ಮಹಾರಾಷ್ಟ್ರದಲ್ಲಿರುವ ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಭೇಟಿ ನೀಡಿ, ಶಿರಡಿ ಸಾಯಿಬಾಬನ ಆಶೀರ್ವಾದವನ್ನು ಪಡೆದಿದ್ದಾರೆ.

ಇನ್ನು ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಿರಡಿ ಬಾಬಾ ಸಾಯಿಬಾಬಾ ಇರುವ ವಿಗ್ರಹವನ್ನು ಉಡುಗೊರೆಯಾಗಿ ನೀಡಿದ್ದಾರೆ.

ಸಾಯಿಬಾಬಾ ದೇವಸ್ಥಾನಕ್ಕೆ ಭೇಟಿ ನೀಡಿರುವ ಕ್ಷಣಗಳನ್ನು ತಮ್ಮ ಎಕ್ಸ್ ಕಥೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಂಚಿಕೊಂಡಿದ್ದಾರೆ.

ಮುಖ್ಯಮಂತ್ರಿಯವರೊಂದಿಗೆ ಕಾನೂನು ಮತ್ತು ಸಂಸದೀಯ ವ್ಯವಾಹಾರಗಳ ಸಚಿವ ಹೆಚ್ ಕೆ ಪಾಟೀಲ್ ಮತ್ತು ಸಿದ್ದರಾಮಯ್ಯರ ರಾಜಕೀಯ ಕಾರ್ಯದರ್ಶಿ ಕೆ ಗೋವಿಂದ ರಾಜ್ ಇರುವುದನ್ನು ಜೊತೆಯಲ್ಲಿದ್ದರು.

Related