ಮುಂಬೈ, ಫೆ.14 : ಬಡವರಿಗೆ, ದಿನಗೂಲಿ ಕಾರ್ಮಿಕರಿಗೆ ಕಡಿಮೆ ದರದಲ್ಲಿ ಊಟ ನೀಡುವುದು ಶಿವ ಭೋಜನ’ ಯೋಜನೆಯ ಮುಖ್ಯ ಉದ್ದೇಶ. ಯೋಜನೆಗೆ ಮೊದಲ ದಿನವೇ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು. ಹೀಗಾಗಿ ನಿತ್ಯ ಇಲ್ಲಿಗೆ ಆಗಮಿಸುವ ಗ್ರಾಹಕರ ಸಂಖ್ಯೆ ಹೆಚ್ಚುತ್ತಲೇ ಇದೆ. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಆರಂಭಿಸಿದ್ದ ಇಂದಿರಾ ಕ್ಯಾಂಟೀನ್ ಯೋಜನೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು. ಮಹಾರಾಷ್ಟ್ರದಲ್ಲಿ ಶಿವಸೇನೆ ಮೈತ್ರಿ ಸರ್ಕಾರ ಜಾರಿಗೆ ಬಂದ ನಂತರ ‘ಇಂದಿರಾ ಕ್ಯಾಂಟೀನ್’ ಮಾದರಿಯಲ್ಲೇ ‘ಶಿವ ಭೋಜನ’ ಯೋಜನೆಯನ್ನು ಪರಿಚಯಿಸಿತ್ತು. 10 ರೂ. ಊಟಕ್ಕೆ ಜನ ಸಾಮಾನ್ಯರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
ಗಣರಾಜ್ಯೋತ್ಸವದ ನಿಮಿತ್ತ ಜ.26ರಂದು ಮಹಾರಾಷ್ಟ್ರ ಸರ್ಕಾರ ‘ಶಿವ ಭೋಜನ’ ಪರಿಚಯಿಸಿತ್ತು. ಕಳೆದ 17 ದಿನಗಳಲ್ಲಿ ಒಟ್ಟು 2.33 ಲಕ್ಷ ಜನರು ಈ ಯೋಜನೆಯ ಲಾಭ ಪಡೆದಿದ್ದಾರೆ. ಅಂದರೆ ನಿತ್ಯ ಸುಮಾರು 13,750 ಜನರು ‘ಶಿವ್ ಭೋಜನ’ದ ಮೂಲಕ ತಮ್ಮ ಹಸಿವನ್ನು ನೀಗಿಸಿಕೊಂಡಿದ್ದಾರೆ.