ಶಿವಕುಮಾರ ಸ್ವಾಮೀಜಿ ಜಯಂತಿ; ಕನ್ನಡದಲ್ಲಿ ನಮನ ಸಲ್ಲಿಸಿದ ಮೋದಿ

ಶಿವಕುಮಾರ ಸ್ವಾಮೀಜಿ ಜಯಂತಿ; ಕನ್ನಡದಲ್ಲಿ ನಮನ ಸಲ್ಲಿಸಿದ ಮೋದಿ

ಬೆಂಗಳೂರು: ಸಾವಿರಾರು ಬಡ ವಿದ್ಯಾರ್ಥಿಗಳ ದಾರಿದೀಪವಾಗಿ, ಬಡವರ ಮಕ್ಕಳ ಜೀವನೋದ್ಧಾರಕ್ಕಾಗಿ ತಮ್ಮ ಜೀವನವನ್ನು ಮುಡಿಪಿಟ್ಟ ಶ್ರೀ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ್ ಸ್ವಾಮೀಜಿಯವರ 117 ಜಯಂತಿಯನ್ನು ಇಂದು ಏಪ್ರಿಲ್ 1ರಂದು ನಡೆದಾಡುವ ದೇವರೆಂದೇ ಪ್ರಸಿದ್ಧಿಯನ್ನು ಹೊಂದಿರುವ ಶ್ರೀ ಸಿದ್ಧಗಂಗಾ ಮಠದ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಗೆ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಕನ್ನಡದಲ್ಲಿ ಶಿವ್‌ಕುಮಾರ್ ಸ್ವಾಮೀಜಿಯವರ ನಮನ ಸಲ್ಲಿಸಿದ್ದಾರೆ.

ಹೌದು, ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶ ಪ್ರಕಟಿಸಿರುವ ಮೋದಿ, ಶ್ರೀಗಳ ಆಶಯವನ್ನು ಈಡೇರಿಸುವ ನಿಟ್ಟಿನಲ್ಲಿ ನಾವು ನಿರಂತರ ಕಾರ್ಯಮಗ್ನರಾಗಿರುತ್ತೇವೆ ಎಂದು ಭರವಸೆ ನೀಡಿದ್ದಾರೆ.‘ಪರಮಪೂಜ್ಯ ಡಾ. ಶ್ರೀಶ್ರೀಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ಅವರಿಗೆ ನಮನಗಳು. ನಿಸ್ವಾರ್ಥ ಮತ್ತು ಕರುಣೆಯ ನೈಜ ಸಾಕಾರಮೂರ್ತಿಗಳಾಗಿದ್ದ ಶ್ರೀಗಳು ಸಮಾಜ ಸೇವೆಗೆ ಅಪ್ರತಿಮ ಕೊಡುಗೆಗಳನ್ನು ನೀಡಿದ್ದಾರೆ. ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಅಭಿವೃದ್ಧಿಯಲ್ಲಿ ಅವರ ಕೆಲಸವು ಲಕ್ಷಾಂತರ ಜನರ ಜೀವನವನ್ನು ತಲುಪಿದೆ ಮತ್ತು ಸಮರ್ಪಣೆ ಹಾಗೂ ಮಾನವೀಯ ಸೇವೆಗೆ ಅತ್ಯುನ್ನತ ಉದಾಹರಣೆಯಾಗಿದೆ. ನಮ್ಮ ಸಮಾಜದ ಕುರಿತಾಗಿ ಶ್ರೀಗಳ ಆಶಯವನ್ನು ಈಡೇರಿಸುವ ನಿಟ್ಟಿನಲ್ಲಿ ನಾವು ನಿರಂತರ ಕಾರ್ಯಮಗ್ನರಾಗಿರುತ್ತೇವೆ’ ಎಂದು ಎಕ್ಸ್​ ಸಂದೇಶದಲ್ಲಿ ಮೋದಿ ಉಲ್ಲೇಖಿಸಿದ್ದಾರೆ.

Related