ಕೈ ಪಕ್ಷಕ್ಕೆ ಶುಭಾಶಯ ಕೋರಿದ ಶೋಭಾ ಕರಂದ್ಲಾಜೆ

ಕೈ ಪಕ್ಷಕ್ಕೆ ಶುಭಾಶಯ ಕೋರಿದ ಶೋಭಾ ಕರಂದ್ಲಾಜೆ

ಬೆಂಗಳೂರು: ಇಂದು ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು ಇದರಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದ್ದರಿಂದ ಶೋಭಾ ಕರಂದ್ಲಾಜೆ ಅವರು ಕಾಂಗ್ರೆಸ್ ಪಕ್ಷಕ್ಕೆ ಶುಭಾಶಯ ತಿಳಿಸಿದ್ದಾರೆ.

ಚುನಾವಣೆಯಲ್ಲಿ ಸೋಲು-ಗೆಲುವು ಸಹಜ. ನಾವು ಒಂದು ವಿಪಕ್ಷವಾಗಿ ಜನರ ಸೇವೆ ಮಾಡುತ್ತೇವೆ. ಕಾಂಗ್ರೆಸ್‌ಗೆ ಆಲ್ ದಿ ಬೆಸ್ಟ್ ಎಂದು ಸಂಸದೆ ಶೋಭಾ ಕರಂದ್ಲಾಜೆ ಅವರು ಶನಿವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋಲು, ಗೆಲುವು ಸಹಜವಾಗಿದೆ. ಕಾಂಗ್ರೆಸ್‌ಗೆ ಜನರು ಆಶೀರ್ವಾದ ಮಾಡಿದ್ದಾರೆ. ನಾವು ಒಂದು ವಿಪಕ್ಷವಾಗಿ ಜನರ ಸೇವೆ ಮಾಡುತ್ತೇವೆ. ಒಳ್ಳೆಯ ವಿರೋಧ ಪಕ್ಷವಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.

 

Related