ಪ್ರಶಾಂತ್ ಅಂತ್ಯಕ್ರಿಯೆ ವೇಳೆ ಶೋಭಾ ಕರಂದ್ಲಾಜೆ ಭಾಗಿ

ಪ್ರಶಾಂತ್ ಅಂತ್ಯಕ್ರಿಯೆ ವೇಳೆ ಶೋಭಾ ಕರಂದ್ಲಾಜೆ ಭಾಗಿ

ಬೆಂಗಳೂರು: ಹಾಲಿ ಸಂಸದೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಶೋಭಾ ಕರಂದ್ಲಾಜೆ ಅವರು ನಿನ್ನೆ ಕೆ ಆರ್ ಪುರಂ ಸುತ್ತಮುತ್ತಲಿನಲ್ಲಿ ಭರ್ಜರಿ ಪ್ರಚಾರವನ್ನು ಕೈಗೊಂಡಿದ್ದರು.

ಇನ್ನು ಈ ವೇಳೆ ಬಿಜೆಪಿ ಕಾರ್ಯಕರ್ತನೊಬ್ಬ ಶೋಭಾ ಕರಂದ್ಲಾಜೆ ಅವರ ಕಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪ್ರಕಾಶ್ ಎಂಬ ಟಿಸಿ ಪಾಳ್ಯ ಮೂಲದ ಬಿಜೆಪಿ ಕಾರ್ಯಕರ್ತ ಸಾವನ್ನಪ್ಪಿರುವ ಘಟನೆ ನಡೆದಿದೆ.

ಇಂದು ಪ್ರಕಾಶ್ ಅವರ ಅಂತ್ಯ ಕ್ರಿಯೆ ನೆರವೇರಿದ್ದು, ಈ ಅಂತ್ಯಕ್ರಿಯೆಯಲ್ಲಿ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಕೆ ಆರ್ ಪುರಂ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವಂತಹ ಬೈರತಿ ಬಸವರಾಜ್ ಅವರು ಭಾಗಿಯಾಗಿದ್ದರು.

ಬಳಿಕ ಮಾತನಾಡಿದ ಶೋಭಾ ಅವರು, ಮೃತ ಪ್ರಕಾಶ್ ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ನಿನ್ನೆ ಬಿಜೆಪಿ ಕಾರ್ಯಕರ್ತರ ಸಭೆಗೆ ಆಗಮಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿ ಮೃತಪಟ್ಟಿದ್ದು, ಮೃತರ ಕುಟುಂಬದ ಜೊತೆ ತಾವಿರುವುದಾಗಿ ತಿಳಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಕಾರ್ಯಕರ್ತನ ಮೃತದಿಂದ ಪ್ರತಿಯೊಬ್ಬರ ಮನಸ್ಸಲ್ಲಿ ಹಬ್ಬದ ವಾತಾವರಣ ಕಳೆದಿದೆ ಎಂದರು.

ಅಂತ್ಯಕ್ರಿಯೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ ಅವರು,  ಪ್ರಶಾಂತ್ ಅವರು ಬಿಜೆಪಿಯ ಒಬ್ಬ ಒಳ್ಳೆ ಕಾರ್ಯಕರ್ತ ಅವರಿಗೆ ಹೀಗಾಗಬಾರದಿತ್ತು. ಇದರಿಂದ ಎಲ್ಲರ ಮನಸ್ಸಿಗೂ ಕೂಡ ಗಾಯವಾಗಿದೆ ಎಂದು ಹೇಳಿದರು.

 

Related