ಸರ್ಕಾರದಿಂದ ದೀಪಾವಳಿಗೆ ಶಾಕ್

ಸರ್ಕಾರದಿಂದ ದೀಪಾವಳಿಗೆ ಶಾಕ್

ಬೆಂಗಳೂರು : ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ನಿಷೇಧ ಮಾಡುವ ಕುರಿತು ಸರ್ಕಾರ ಶೀಘ್ರ ನಿರ್ಧಾರ ತೆಗೆದುಕೊಳ್ಳಲಿದೆ. ದೀಪಾವಳಿಯಲ್ಲಿ ಪಟಾಕಿಯಿಂದ ಬರುವ ಹೊಗೆಯಿಂದ ಕೊರೋನಾ ಸೋಂಕು ಹೆಚ್ಚಳವಾಗುವ ಸಾಧ್ಯತೆ ಇರುವ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲು ತಜ್ಞರ ಸಮಿತಿ ರಚಿಸಲಾಗಿದೆ. ಈ ಸಮಿತಿ ವರದಿ ಆಧಾರಿಸಿ ಪಟಾಕಿ ನಿಷೇಧಿಸುವ ಸಂಬಂಧ ಸಿಎಂ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಹೇಳಿದರು.

ವಿಧಾನಸೌಧದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ದೀಪಾವಳಿಯ ಸರಳ ಆಚರಣೆ ಬಗ್ಗೆ ತೀರ್ಮಾನ ಮಾಡಲಾಗುತ್ತದೆ. ಪಟಾಕಿ ಹೊಗೆಯಿಂದ ಜನರ ಆರೋಗ್ಯಕ್ಕೆ ತೊಂದರೆಯಾಗುತ್ತದೆ. ಕೊರೊನಾ ಸೋಂಕು ಸಹ ಹೆಚ್ಚಾಗುತ್ತದೆ. ಹಾಗಾಗಿಯೇ ಈ ಬಗ್ಗೆ ವರದಿ ನೀಡಲು ತಜ್ಞರ ಸಮಿತಿ ರಚಿಸಿದ್ದೇವೆ. ಇನ್ನೆರಡು ದಿನಗಳಲ್ಲಿ ಸಮಿತಿ ವರದಿ ನೀಡಲಿದೆ ಎಂದರು.

Related