ಸಿದ್ದರಾಮಯ್ಯ ಇನ್ನೂ ಸಣ್ಣತನ ಬಿಟ್ಟಿಲ್ಲ: ಸಚಿವ

ಸಿದ್ದರಾಮಯ್ಯ ಇನ್ನೂ ಸಣ್ಣತನ ಬಿಟ್ಟಿಲ್ಲ: ಸಚಿವ

ಚಿತ್ರದುರ್ಗ : ಜಿಲ್ಲೆಯಲ್ಲಿ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುತ್ತಿದ್ದು, ತನಿಖೆಗೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿಯವರ ವಿಚಾರಣೆ ನಡೆಯುತ್ತಿದೆ.

ಈ ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದ ಸಂದರ್ಭದಲ್ಲೂ ಅವರ ಮೇಲೆ ರೈಡ್‌ಗಳು ಆಗಿದ್ದವು. ತಪ್ಪು ಮಾಡಿದವರ ತನಿಖೆ ನಡೆಸುವುದು ತಪ್ಪಾ? ಎಂದು ಪ್ರಶ್ನಿಸಿದ್ದಾರೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ.

ಚಿತ್ರದುರ್ಗ ಜಿಲ್ಲೆಯಲ್ಲಿ ಮಾತನಾಡಿದ ಅವರು, “ವಿನಯ್ ಕುಲಕರ್ಣಿ ವಿಚಾರಣೆ ಕುರಿತು ಕಾಂಗ್ರೆಸ್ ಹಲವು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದರ ಹಿಂದೆ ರಾಜಕೀಯ ಉದ್ದೇಶವಿದೆ ಎನ್ನುತ್ತಿದ್ದಾರೆ. ಈ ರೀತಿ ಹೇಳಿಕೆ ನೀಡುವುದು ಕಾಂಗ್ರೆಸ್ ನವರ ಹುಟ್ಟುಗುಣ. ಸಿದ್ದರಾಮಯ್ಯಗೆ ವಿರೋಧ ಪಕ್ಷ ನಾಯಕನಾಗಿರಲು ಯೋಗ್ಯತೆ ಇಲ್ಲ. ಅವರು ಅಯೋಗ್ಯರು. ರಾಜ್ಯದ ಜನತೆ ಅವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಕೂರಿಸಿದ್ದರು. ಅವರು ಸಣ್ಣತನ ಬಿಟ್ಟಿಲ್ಲ, ಸಿದ್ದರಾಮಯ್ಯರವರ ಯಾವ ಹೇಳಿಕೆಗೂ ಬೆಲೆಯಿಲ್ಲ” ಎಂದಿದ್ದಾರೆ.

Related