ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಹ್ಯಾಪಿ ಜರ್ನಿ ಹೇಳಿದ ಸಿದ್ದರಾಮಯ್ಯ

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಹ್ಯಾಪಿ ಜರ್ನಿ ಹೇಳಿದ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ  ಅವರು ಅಧಿಕೃತವಾಗಿ ಚಾಲನೆ ನೀಡಿದರು. ಶಕ್ತಿ ಯೋಜನೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶಕ್ತಿ ಯೋಜನೆಯ ಲೋಗೋ ಹಾಗೂ ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ಅನ್ನು ಬಿಡುಗಡೆ ಮಾಡಿ ಬಳಿಕ ಐವರು ಮಹಿಳೆಯರಿಗೆ ಸಾಂಕೇತಿಕವಾಗಿ ಶಕ್ತಿಯೋಜನೆಯ ಸ್ಮಾರ್ಟ್ ಕಾರ್ಡ್ ವಿತರಿಸಿದರು. ಬಳಿಕ ಮಾತನಾಡಿದ ಸಿದ್ದರಾಮಯ್ಯ ಅವರು, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯ ಹಿಂದಿನ ಮರ್ಮವನ್ನು ತಿಳಿಸಿದರು. ಅಲ್ಲದೇ ಇದೇ ವೇಳೆ ಉಚಿತ ಪ್ರಯಾಣ ಮಾಡುವ ಮಹಿಳೆಯರಿಗೆ ಶುಭ ಹಾರೈಸಿದರು.

ಶಕ್ತಿ ಯೋಜನೆಯನ್ನು ಎಲ್ಲರೂ ಸಂತೋಷದಿಂದ ಉದ್ಘಾಟಿಸಿದ್ದೇವೆ. ಮಹಿಳೆಯರು ಶತಮಾನದಿಂದ ಅವಕಾಶದಿಂದ ವಂಚಿತರಾಗಿದ್ದಾರೆ. ಸಾಮಾಜಿಕ, ಆರ್ಥಿಕ ಅಸಮಾನತೆಗೆ ಮಹಿಳೆಯರು ಒಳಗಾಗಿದ್ದಾರೆ. ಹೀಗಾಗಿ ಮಹಿಳೆಯರು ಸಮಾಜದಲ್ಲಿ ಸದೃಢವಾಗಿ ನಿಲ್ಲಲು ಈ ಯೋಜನೆ ಜಾರಿ ಮಾಡಲಾಗಿದೆ ಎಂದರು.

 

Related