ನೇಕಾರರ ಸಮಸ್ಯೆ ಆಲಿಸಿದ ಸಿದ್ದರಾಮಯ್ಯ

ನೇಕಾರರ ಸಮಸ್ಯೆ ಆಲಿಸಿದ ಸಿದ್ದರಾಮಯ್ಯ

ದೊಡ್ಡಬಳ್ಳಾಪುರ: ಕೊರೋನಾ ಸಂದರ್ಭದಲ್ಲಿ ಸಂಪ್ರದಾಯ ವೃತ್ತಿಗಳಾದ ನೇಕಾರರು, ಕುಂಬಾರರು, ಕ್ಷೌರಿಕರ ಜೀವನ ಅಸ್ತವ್ಯಸ್ತಗೊಂಡಿದೆ. ಇದನ್ನು ಮನಗಂಡ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ದೊಡ್ಡಬಳ್ಳಾಪುರಕ್ಕೆ ತೆರಳಿ ಕೊರೋನಾ ವೇಳೆ ನೇಕಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಿದರು.

ಅಲ್ಲದೇ ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ನೇಕಾರರಾದ ದೊಡ್ಡಬಳ್ಳಾಪುರದ ನಾರಾಯಣ ಅವರ ನಿವಾಸಕ್ಕೆ ಭೇಟಿ ನೀಡಿ, ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದೆ.

ಈ ವೇಳೆ ಶಾಸಕರಾದ ವೆಂಕಟರಮಣಯ್ಯ, ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಲಕ್ಷ್ಮಿನಾರಾಯಣ ಅವರು ಉಪಸ್ಥಿತರಿದ್ದರು.

Related