ಸರಳ ಕಾವೇರಿ-ಮನೆ ಬಾಗಿಲಿಗೆ ಸಂಚಾರಿ ಕಾವೇರಿ!

ಸರಳ ಕಾವೇರಿ-ಮನೆ ಬಾಗಿಲಿಗೆ ಸಂಚಾರಿ ಕಾವೇರಿ!

ಬೆಂಗಳೂರು: ವಿಧಾನಸೌಧ ಆವರಣದ ಗ್ರ್ಯಾಂಡ್‌ ಸ್ಟೆಪ್ಸ್‌ ಮುಂಭಾಗ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ತಂದಿರುವ ಸರ್ವರಿಗೂ ‘ಸರಳ ಕಾವೇರಿ’ ಮನೆ ಬಾಗಿಲಿಗೆ ‘ಸಂಚಾರಿ ಕಾವೇರಿ’ ಯೋಜನೆಗಳಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,’ಸರಳ ಕಾವೇರಿ’ ಯೋಜನೆಯ‌ ಮೂಲಕ ನೀರಿನ ಸಂಪರ್ಕ ಶುಲ್ಕದಲ್ಲಿ ಕೇವಲ 20% ಪಾವತಿ ಮಾಡಿ ಹೊಸ ಸಂಪರ್ಕ ಪಡೆಯಲು, ಉಳಿಕೆ 80% ಮೊತ್ತವನ್ನು ಕಡಿಮೆ ಬಡ್ಡಿದರದಲ್ಲಿ 12 ಕಂತುಗಳಲ್ಲಿ ಪಾವತಿಸಲು ಅವಕಾಶ ನೀಡಲಾಗಿದೆ. ಅಪಾರ್ಟ್‌ಮೆಂಟ್ ವೆಲ್‌ಫೇರ್ ಅಸೋಸಿಯೇಷನ್ ಅಥವಾ ಮನೆಗಳ ಮಾಲೀಕರಿಗೆ ಹೊಸ ಸಂಪರ್ಕ ಪಡೆಯಲು 2 ತಿಂಗಳು ಕಾಲಾವಕಾಶ ನೀಡಲಾಗಿದೆ ಎಂದರು. ಇದನ್ನೂ ಓದಿ: ನಮ್ಮ ಸೈನಿಕರು ನಮ್ಮ ಹೆಮ್ಮೆ: ಡಿಕೆಶಿ

ಇನ್ನು, ‘ಸಂಚಾರಿ ಕಾವೇರಿ’ ಯೋಜನೆಯ ಮೂಲಕ ಮಹಾನಗರಿಯ ಜನತೆಗೆ ಶುದ್ಧ ಕುಡಿಯುವ ನೀರನ್ನು ಬೆಂಗಳೂರು ಜಲಮಂಡಳಿಯ ಟ್ಯಾಂಕ‌ರ್ ಮೂಲಕ ನೇರವಾಗಿ ಮನೆಬಾಗಿಲಿಗೆ ತಲುಪಿಸಲಾಗುತ್ತದೆ. ಬಿಐಎಸ್ ಪ್ರಮಾಣಿತ ಶುದ್ಧ ಕುಡಿಯುವ ನೀರನ್ನು ಸಕಾಲದಲ್ಲಿ ಪೂರೈಸುವ ವ್ಯವಸ್ಥೆ ರೂಪಿಸಲಾಗಿದೆ. ಮೊಬೈಲ್ ಸ್ನೇಹಿ ‘ಸಂಚಾರಿ ಕಾವೇರಿ’ ಆ್ಯಪ್ ಹಾಗೂ ವೆಬ್‌ಸೈಟ್ ರಚಿಸಿ, ಆನ್ ಡಿಮ್ಯಾಂಡ್ ಟ್ಯಾಂಕರ್ ನೀರು ಬುಕ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

Related