ಸರಳವಾಗಿ ಸ್ವಾತಂತ್ರ‍್ಯ ದಿನಾಚರಣೆ ಆಚರಿಸಲು ಕರೆ

  • In State
  • August 10, 2021
  • 390 Views
ಸರಳವಾಗಿ ಸ್ವಾತಂತ್ರ‍್ಯ ದಿನಾಚರಣೆ ಆಚರಿಸಲು ಕರೆ

ಮುದ್ದೇಬಿಹಾಳ : ರಾಷ್ಟ್ರೀಯ ಹಬ್ಬವಾದ ಸ್ವಾತಂತ್ರ‍್ಯ ದಿನಾಚರಣೆಯನ್ನು ಕೋವಿಡ್ ನಿಯಮ ಅನುಸರಿಸುವುದರ ಮುಖಾಂತರ ಸರಳವಾಗಿ ಆಚರಿಸಬೇಕೆಂದು ತಹಶೀಲ್ದಾರ್ ಬಿ.ಎಸ್. ಕಡಕಭಾವಿ ಕರೆ ನೀಡಿದರು. ಸೋಮವಾರ ಕಚೇರಿಯ ಸಭಾ ಭವನದಲ್ಲಿ ತಾಲೂಕು ಆಡಳಿತದಿಂದ ಸ್ವಾತಂತ್ರ‍್ಯ ದಿನಾಚರಣೆ ಕುರಿತು ಪೂರ್ವಭಾವಿ ಸಭೆ ನಡೆಸಲಾಗಿದೆ.
ವಿವಿಧ ಇಲಾಖೆಗಳಿಗೆ ದಿನಾಚರಣೆಯ ಜವಾಬ್ದಾರಿಯನ್ನು ವಹಿಸಿದ್ದು, ಸಭೆಗೆ ಆಗಮಿಸಿದ ಕೆಲವು ಸರ್ಕಾರಿ ಇಲಾಖೆಯ ಅಧಿಕಾರಿಗಳಿಗೆ ನೋಟಿಸ್ ನೀಡಲು ತಹಶೀಲ್ದಾರ್ ಸೂಚಿಸಿದರು.
ಈ ವೇಳೆ ಸಭೆಯಲ್ಲಿ ತಾ.ಪಂ. ಇ.ಓ ಎಸ್ ವಾಯ್ ಹೊಕ್ರಾಣಿ, ವಿವಿಧ ಇಲಾಖೆಯ ಅಧಿಕಾರಿಗಳಾದ ಉಮೇಶ ಲಮಾಣಿ, ಶಿವಾನಂದ ಮೇಟಿ, ಎಸ್ ಬಿ ಹಲ್ದೂರ, ಟಿ.ಡಿ. ಲಮಾಣಿ, ಅನುರಾಧ ತೇರದಾಳ ಇನ್ನಿತರರು ಉಪಸ್ಥಿತರಿದ್ದರು.

Related