ಏಕಕಾಲಕ್ಕೆ ರಾಜ್ಯವ್ಯಾಪಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ

ಏಕಕಾಲಕ್ಕೆ ರಾಜ್ಯವ್ಯಾಪಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ

ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಇಂದು ಮೈಸೂರಿನಲ್ಲಿ ಭರ್ಜರಿ ಚಾಲನೆ ನೀಡಲಾಗುತ್ತಿದೆ. ಇನ್ನು ಬರೀ ಮೈಸೂರಿನಲ್ಲಿ ಮಾತ್ರವಲ್ಲದೆ ರಾಜ್ಯದಾದ್ಯಂತ ಇಂದು ಪ್ರತಿ ಜಿಲ್ಲೆಯಲ್ಲೂ ಸಹ ಗೃಹಲಕ್ಷ್ಮೀ ಯೋಜನೆಗೆ ಸ್ಥಳೀಯ ಶಾಸಕರ ನೇತೃತ್ವದಲ್ಲಿ ಚಾಲನೆ ನೀಡಲಾಗುತ್ತಿದೆ.

ಹೌದು, ಇಂದು ಏಕಕಾಲಕ್ಕೆ ರಾಜ್ಯವ್ಯಾಪಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಸಿಗಲಿದೆ. ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಕಾಂಗ್ರೆಸ್ ನಾಯಕರು ಚಾಲನೆ ನೀಡಲಿದ್ದು ಬೆಂಗಳೂರಿನ ಟೌನ್​ಹಾಲ್​ನಲ್ಲೂ ಕಾರ್ಯಕ್ರಮ ಚಾಲನೆಗೆ ಸಿದ್ಧತೆ ನಡೆದಿದೆ.

ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್, ಆಡಳಿತಾಧಿಕಾರಿ ರಾಕೇಶ್ ಸಿಂಗ್ ನೇತೃತ್ವದಲ್ಲಿ ಮಧ್ಯಾಹ್ನ 12 ಗಂಟೆಗೆ ಟೌನ್​ಹಾಲ್​ನಲ್ಲಿ ಕಾರ್ಯಕ್ರಮಕ್ಕೆ ಚಾಲನೆ ಕೊಡಲಾಗುತ್ತೆ. ಪ್ರತಿ ವಾರ್ಡ್​ನಲ್ಲೂ ಕಾರ್ಯಕ್ರಮ ವೀಕ್ಷಣೆಗೆ LED ಸ್ಕ್ರೀನ್ ಅಳವಡಿಸಲಾಗಿದೆ.

 

Related