ಬೆಂಗಳೂರು: ನಿನ್ನೆ ಚಿತ್ರದುರ್ಗದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಏಕವಚನದಲ್ಲಿ ಮಾತನಾಡಿದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಷಮೆ ಯಾಚಿಸಿದ್ದಾರೆ.
ಚಿತ್ರದುರ್ಗದಲ್ಲಿ ನಿನ್ನೆ ನಡೆದ ಶೋಷಿತರ ಜಾಗೃತಿ ಸಮಾವೇಶದಲ್ಲಿ ಮಾತನಾಡುವ ವೇಳೆ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕನ್ನು ಟೀಕಿಸುತ್ತಾ, ರಾಷ್ಟ್ರಪತಿ ದ್ರೌಪದಿ ಮುರ್ಮು ಶೋಷಿತ ಸಮುದಾಯಕ್ಕೆ ಸೇರಿದವಳು, ಸಂವಿಧಾನ ರಕ್ಷಕರೆಂದು ಕರೆಸಿಕೊಳ್ಳುವ ಬಿಜೆಪಿಯವರು ಅವಳನ್ನು ನೂತನ ಸಂಸತ್ ಭವನ ಉದ್ಘಾಟನೆ ಹಾಗೂ ರಾಮಮಂದಿರ ಉದ್ಘಾಟನೆಗೆ ಕರೆಯಲಿಲ್ಲ. ಇವರ ಯೋಗ್ಯತೆಗೆ ನನ್ನ ವಿರುದ್ಧ ಮಾತನಾಡುತ್ತಾರೆ, ನಾನು ಹಿಂದೂ ವಿರೋಧಿ ಎನ್ನುತ್ತಾರೆ. ನಾನು ಯಾರ ವಿರೋಧಿ ಕೂಡ ಅಲ್ಲ, ನಾನು ಸಮಾಜಪರ ಇರುವವನು ಎಂದು ಆಕ್ರೋಶಭರಿತರಾಗಿ ಮಾತನಾಡಿದ್ದರು.
ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ರಾಷ್ಟ್ರಪತಿಗಳಾಗಿರುವ ದ್ರೌಪದಿ ಮುರ್ಮು ಅವರಿಗೆ
ಸಂಸತ್ ಭವನ ಉದ್ಘಾಟನೆಗೆ ಆಹ್ವಾನ ನೀಡದೆ @BJP4India ನಾಯಕರು ಅವಮಾನಿಸಿರುವುದು ನನಗೆ ತೀವ್ರ ನೋವು ಉಂಟುಮಾಡಿದ್ದು ಮಾತ್ರವಲ್ಲ ನನ್ನಲ್ಲಿ ಆಕ್ರೋಶ ಹುಟ್ಟಿಸಿತ್ತು.ಶೋಷಿತರ ಜಾಗೃತಿ ಸಮಾವೇಶದಲ್ಲಿ ಸ್ವಲ್ಪ ಭಾವುಕನಾಗಿ ಈ ಆಕ್ರೋಶವನ್ನು…
— Siddaramaiah (@siddaramaiah) January 28, 2024
ಗೌರವಾನ್ವಿತ ರಾಷ್ಟ್ರಪತಿಗಳು, ದೇಶದ ಪ್ರಥಮ ಪ್ರಜೆ ಆಗಿರುವ ಶ್ರೀಮತಿ ದ್ರೌಪದಿ ಮುರ್ಮು @rashtrapatibhvn ಅವರನ್ನು ಏಕವಚನದಲ್ಲಿ (ಆ ಪದವನ್ನು ಬರೆಯಲಾರೆ) ಎಂದು ತುಚ್ಛವಾಗಿ ಸಂಬೋಧಿಸಿದ ಕೀಳು, ವಿಕೃತ, ಹೀನ ನಾಲಗೆಯ ಸಿದ್ದರಾಮಯ್ಯ @siddaramaiah ರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೂಡಲೇ ವಜಾ ಮಾಡಬೇಕು.1/6 #ಆಚಾರಗೆಟ್ಟ_ಮುಖ್ಯಮಂತ್ರಿ pic.twitter.com/h6VCoT1B7Z
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 28, 2024