ಸೋಲಿನ ಅಸಮಾಧಾನ ಹೊರಹಾಕಿದ ಸೋಮಣ್ಣ

ಸೋಲಿನ  ಅಸಮಾಧಾನ ಹೊರಹಾಕಿದ ಸೋಮಣ್ಣ

ತುಮಕೂರು,ನ.25: ವಿಧಾನಸಭೆಯಲ್ಲಿ ಎರಡು ಕ್ಷೇತ್ರದಲ್ಲಿ ಹೀನಾಯ ಸೋಲಿನ ಬಳಿಕ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಮಾಜಿ ಸಚಿವ ವಿ.ಸೋಮಣ್ಣ ಆಗಮಿಸಿ ಸಿದ್ದಲಿಂಗಾ ಶ್ರೀಗಳನ್ನು ಭೇಟಿ ಮಾಡಿದ
ನಂತರ ಮಾತನಾಡಿದ ಮಾಜಿ ಸಚಿವ ಸೋಮಣ್ಣ ‘ಇಲ್ಲಿ ಬಿಟ್ಟು ಅಲ್ಲಿ ಸ್ಪರ್ಧೆ ಮಾಡಿದ್ದೇ ನನ್ನ ಮಹಾ ಅಪರಾಧ’ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಚುಣಾವಣೆಯ ಸಂದರ್ಭದಲ್ಲಿ ನಮ್ಮ ಮನೆಗೆ ಬೇಟಿನೀಡಿ ಮನೆಯಲ್ಲಿ ಕುಳಿತುಕೊಂಡು ಜೀವ ತೆಗೆದರು’ 2 ಗಂಟೆ ಮನೆಯಲ್ಲಿ ಕುಳಿತುಕೊಂಡಿದ್ರು, ಆಗಲ್ಲ ಅಂತಾ ಹೇಳಿದ್ದೆ. ಇದಾದ ನಂತರ ಪ್ರಧಾನಿ ದೆಹಲಿಗೆ ಕರೆಸಿ ನೀನು ಸ್ಪರ್ಧೆ ಮಾಡು ಎಂದರು ಎಂದು ಸೋಮಣ್ಣ ಅಸಮಾಧಾನ ಹೊರ ಹಾಕಿದ್ದಾರೆ.

2023ರ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಚಿವ ವಿ ಸೋಮಣ್ಣ ವರುಣ ಮತ್ತು ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಎರಡೂ ಕ್ಷೇತ್ರದಲ್ಲಿ ಸೋತಿದ್ದರು, ಇದರಿಂದ ಬೇಸರಗೊಂಡ ಸೋಮಣ್ಣ ಸಿದ್ದಲಿಂಗಾ ಶ್ರೀಗಳ ಎದುರು ಅಸಮಾಧಾನ ಹೊರ ಹಾಕಿದ್ದಾರೆ.

Related