ರಾಜ್ಯದಲ್ಲಿ ಕೆಲವು ಬಿಜೆಪಿ ನಾಯಕರಿಗೆ ದುರಂಕಾರ ಬಂದಿದೆ: ರೇಣುಕಾಚಾರ್ಯ

ರಾಜ್ಯದಲ್ಲಿ ಕೆಲವು ಬಿಜೆಪಿ ನಾಯಕರಿಗೆ ದುರಂಕಾರ ಬಂದಿದೆ: ರೇಣುಕಾಚಾರ್ಯ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಪಕ್ಷದ ಕೆಲವು ನಾಯಕರಿಗೆ ಇತ್ತೀಚಿಗೆ ಬಹಳ ದುರಂಕಾರ ಬಂದಿದೆ ಅಂತವರು ಬಹಳ ದಿನ ಬಿಜೆಪಿ ಪಕ್ಷದಲ್ಲಿ ಉಳಿಯುವುದಿಲ್ಲ ಎಂದು ಮಾಜಿ ಸಚಿವ ರೇಣುಕಾಚಾರ್ಯ ಅವರು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಪಕ್ಷ ಸೋತ ನಂತರ ಎಲ್ಲರನ್ನೂ ಕರೆದು ಮಾತಾಡಿಸಬೇಕು. ಯಡಿಯೂರಪ್ಪ ಹಿಂದೆಲ್ಲ ಆ ಕೆಲಸ ಮಾಡಿದ್ರು. ಆದರೆ ಬಿಜೆಪಿಯಲ್ಲಿ ಕೆಲವರ ದುರಹಂಕಾರದಿಂದ ಬಹಳ ಜನ ಬೇಸತ್ತು ಹೋಗಿದ್ದಾರೆ ಎಂದು ಕಿಡಿಕಾರಿದರು.

ಬೇಸತ್ತು ಹೋಗಿರುವವರು ಮುಂದೆ ಪಕ್ಷ ಬಿಡಬಹುದು. ಯಡಿಯೂರಪ್ಪ ಅವರನ್ನು ಕಡೆಗಣಿಸಲಾಗಿದೆ ಅಂತ ಜನ ಮಾತಾಡ್ತಿದ್ದಾರೆ. ನಾನು ಹೇಳ್ತಿಲ್ಲ, ಜನ ಹಾಗೆ ಹೇಳ್ತಿದ್ದಾರೆ. ಹಲವರು ಪಕ್ಷದಲ್ಲಿ ಮಾತಾಡಲು ಭಯಪಡುತ್ತಿದ್ದಾರೆ. ಬಿಜೆಪಿಗೆ ಮಧ್ಯದಲ್ಲಿ ಯಾರು ಬಂದಿದ್ದಾರೋ ಅವರ ಆಟವೇ ಜಾಸ್ತಿ ಆಗ್ತಿದೆ ಎಂದರು.

ರಾಜಕೀಯದಲ್ಲಿ ಗಾಡ್ ಫಾದರ್ ಬೇಕು. ಯಡಿಯೂರಪ್ಪ ಅವರಿಗೆ ಆ ಸಾಮರ್ಥ್ಯ ಇತ್ತು. ಯಡಿಯೂರಪ್ಪ ಅವರ ನಾಯಕತ್ವ ಪಕ್ಷ ಗಟ್ಟಿಗೊಳಿಸಿದೆ. ಈಗಿನ ಪರಿಸ್ಥಿತಿಗೆ ಈಗಾಗಲೇ ಕೆಲವರು ಪಕ್ಷದಿಂದ ಹೊರಗೆ ಹೋಗಿದ್ದಾರೆ. ಅಭದ್ರತೆಯಿಂದ ಯಾರು ಬೇಕಾದರೂ ಪಕ್ಷ ಬಿಟ್ ಹೋಗಬಹುದು. ಮೋದಿಯವ್ರು ಯಡಿಯೂರಪ್ಪ ಅವರನ್ನು ಕಡೆಗಣಿಸಿಲ್ಲ. ಮಧ್ಯದಲ್ಲಿ ಇರೋರು ಕೆಲವರು ಯಡಿಯೂರಪ್ಪ ಅವರನ್ನು ಕಡೆಗಣಿಸ್ತಿದ್ದಾರೆ ಎಂದರು.

 

Related