ಕೆಲ ರೈತ ಮುಖಂಡರು ಬದುಕಿದ್ದೇವೆಂದು ಹೋರಾಟ

ಕೆಲ ರೈತ ಮುಖಂಡರು ಬದುಕಿದ್ದೇವೆಂದು ಹೋರಾಟ

ಬೆಂಗಳೂರು : ಕೆಲ ರೈತ ಮುಖಂಡರು ತಾವು ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಹೋರಾಟ ನಡೆಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇವಲ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಕೆಲವರಿಗೆ ತಾವು ಏಕೆ ಪ್ರತಿಭಟನೆ ಮಾಡುತ್ತಿದ್ದೇವೆ ಎಂಬುದು ಗೊತ್ತಿಲ್ಲ. ಯಾವ ಕಾರಣಕ್ಕಾಗಿ ಈ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ ಇಲ್ಲ. ರೈತರ ಹೆಸರಿನಲ್ಲಿ ಕೆಲವರು ತಾವು ಬದುಕಿದ್ದೇವೆ ಎಂಬುದನ್ನು ತೋರಿಸಿಕೊಳ್ಳಲು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು.

ನಾವು ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿಲ್ಲ. ರೈತರ ಪ್ರತಿಭಟನೆ ಹತ್ತಿಕ್ಕಿಲ್ಲ. ಟ್ರ‍್ಯಾಕ್ಟರ್ ಗಳಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತದೆ ಎಂಬ ಕಾರಣಕ್ಕೆ ಪ್ರತಿಭಟನೆ ಬೇಡ ಎಂದು ಹೇಳಿದ್ದೇವಷ್ಟೇ ಎಂದು ಸಮರ್ಥಿಸಿಕೊಂಡರು.

ನನ್ನ ಮನೆ ಬಾಗಿಲು ಯಾವತ್ತೂ ತೆರೆದೇ ಇರುತ್ತದೆ. ರೈತರು ಯಾವಾಗ ಬೇಕಾದರೂ ಬಂದು ಮಾತುಕತೆ ನಡೆಸಬಹುದು. ಮೊದಲು ನಿಮ್ಮ ಪ್ರತಿಭಟನೆಯನ್ನು ಹಿಂಪಡೆಯಿರಿ ಎಂದು ಸಿಎಂ ಮನವಿ ಮಾಡಿದರು.

Related