ಇಂದು ನಾಮಪತ್ರ ಸಲ್ಲಿಸಲಿರುವ ಸೌಮ್ಯ ರೆಡ್ಡಿ

ಇಂದು ನಾಮಪತ್ರ ಸಲ್ಲಿಸಲಿರುವ ಸೌಮ್ಯ ರೆಡ್ಡಿ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಲೋಕಸಭಾ ಚುನಾವಣೆ ಕಣ ರಂಗೇರಿದ್ದು, ಇಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸೌಮ್ಯ ರೆಡ್ಡಿ ಅವರು ನಾಮಪತ್ರ ಸಲ್ಲಿಸಲಿದ್ದಾರೆ.

ಬೆಂಗಳೂರು ದಕ್ಷಿಣ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ತೇಜಸ್ವಿ ಸೂರ್ಯ ಸ್ಪರ್ಧಿಸಿದ್ದು ಅವರ ವಿರುದ್ಧ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸೌಮ್ಯ ರೆಡ್ಡಿ ಕಣಕ್ಕಿಳಿದಿದ್ದಾರೆ.

ಇಂದು ಮಧ್ಯಾಹ್ನ 12 ಗಂಟೆಗೆ ಸೌಮ್ಯ ರೆಡ್ಡಿ ಅವರು ತಂದೆ ರಾಮಲಿಂಗ ರೆಡ್ಡಿ ಸಾರಿಗೆ ಸಚಿವರು ಮತ್ತು ಕಾಂಗ್ರೆಸ್ ಮುಖಂಡರು ಜೊತೆ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.

ಇನ್ನು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಬಹಳ ರಂಗೆನಿದ್ದು ತೇಜಸ್ವಿ ಸೂರ್ಯ ಮತ್ತು ಸೌಮ್ಯ ರೆಡ್ಡಿ ಅವರ ನಡುವೆ ತೀಕ್ಷ್ಣ ಪೈಪೋಟಿ ನಡೆದಿದ್ದು ಈ ಕ್ಷೇತ್ರದಲ್ಲಿ ಯಾರಿಗೆ ಗೆಲುವಿನ ಪಟ್ಟ ಸಿಗುತ್ತದೆ ಎಂದು ಕಾದು ನೋಡಬೇಕಿದೆ.

Related