ಬೆಳಗಾವಿ: ರಾಜಕೀಯ ದುರುದ್ದೇಶದಿಂದ ಬಿಜೆಪಿ ನಾಯಕರುಗಳು ಇಲ್ಲದ ಸಲದ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ
ಶುಕ್ರವಾರ ಬೆಳಗಾವಿಯಲ್ಲಿ ಸುವರ್ಣಸೌಧದ ಬಳಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ರಾಜಕೀಯಕ್ಕಾಗಿ ಬಿಜೆಪಿ ಕಾರ್ಯಕರ್ತನ ಮೇಲಿನ ಹಲ್ಲೆ ವಿಚಾರವಾಗಿ ಬಿಜೆಪಿ ನಾಯಕರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ರಾಜಕೀಯವನ್ನು ನಾವು ರಾಜ್ಯ ಸುಧಾರಿಸಲು ಬಳಸಬೇಕೆ ಹೊರತಾಗಿ ಬೇರೆ ಉದ್ದೇಶಗಳಿಗೆ ಬಳಸಬಾರದು ಎಂದು ಬಿಜೆಪಿ ನಾಯಕರ ವಿರುದ್ಧ ಟ ನೀಡಿದ್ದಾರೆ.
ನಿನ್ನೆಯ ಕಲಾಪದಲ್ಲಿ ಬಿಜೆಪಿ ನಾಯಕರು ಪೃಥ್ವಿ ಸಿಂಗ್ ಅವರ ಮೇಲಿನ ಹಲ್ಲೆ ವಿಚಾರವಾಗಿ ಗದ್ದಲ ಸೃಷ್ಟಿಸಿದ ಬಗ್ಗೆ ಕೇಳಿದಾಗ ಅವರು ಈ ರೀತಿ ಉತ್ತರಿಸಿದರು.
ಅದೆಲ್ಲವೂ ಸುಳ್ಳು ಆರೋಪ. ಯಾವುದೇ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆಯಾಗಿಲ್ಲ. ಇದೆಲ್ಲವೂ ಸೃಷ್ಟಿ ಮಾಡಲಾಗಿರುವ ಕಥೆ. ರಾಜಕೀಯ ಉದ್ದೇಶಕ್ಕೆ ಈ ವಿಚಾರವನ್ನು ಎತ್ತುತ್ತಿದ್ದಾರೆ ಎಂದರು.