ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ

ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ

ಬಾಳೆಹೊನ್ನೂರು, ಮಾ. 01. :  ಬಾಳೆಹೊನ್ನೂರು ಶ್ರೀ ರಂಭಾಪುರಿ ಪೀಠದಲ್ಲಿ ಮಾ.5ರಿಂದ 10ರವರೆಗೆ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವ ಅಂಗವಾಗಿ ವಿವಿಧ ಕಾರ್ಯಕ್ರಮಗಳು ಜರುಗಲಿವೆ. ಪ್ರತಿದಿನ ಸಂಜೆ 6.30ಕ್ಕೆ ಬಾಳೆಹೊನ್ನೂರು ಶ್ರೀ ರಂಭಾಪುರಿ ವೀರಸೋಮೇಶ್ವರ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಕಾರ್ಯಕ್ರಮಗಳು ನಡೆಯಲಿವೆ. 5ರಂದು ಧ್ವಜಾರೋಹಣ ಮತ್ತು ಹರಿದ್ರಾಲೇಪನದೊಂದಿಗೆ ಕಾರ್ಯಕ್ರಮ ಆರಂಭವಾಗುತ್ತದೆ. 6ರಂದು ಶಿವಾದ್ವೈತ ಧರ್ಮ ಪರಿಷತ್ ಅನ್ನು ಸಚಿವ ಕೆ.ಎಸ್.ಈಶ್ವರಪ್ಪ ಉದ್ಘಾಟಿಸಲಿದ್ದಾರೆ.  ಬಸವರಾಜ ಶಂಕರ ಉಮರಾಣಿಗೆ ಶ್ರೀ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಮಾನಿಹಳ್ಳಿ ಮಳೆಶಿವಯೋಗೀಶ್ವರ ಶ್ರೀ ಆಶೀರ್ವಚನ ನೀಡುವರು.

 

Related