ಅಸಲಿ ಲೆಕ್ಕ ಜನರ ಮುಂದಿಟ್ಟ ಬಿಜೆಪಿ

ಅಸಲಿ ಲೆಕ್ಕ ಜನರ ಮುಂದಿಟ್ಟ ಬಿಜೆಪಿ

ಬೆಂಗಳೂರು: ಕೋವಿಡ್-19 ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ ಅಕ್ರಮ ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಮತ್ತು ಆರೋಗ್ಯ ಸಚಿವ ಶ್ರೀರಾಮುಲು, ಕಾಂಗ್ರೆಸ್ ನಾಯಕರು ಮಾಡುತ್ತಿರುವ ಆರೋಪಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಸೋಮವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಯೊಂದು ಪರಿಕರವನ್ನು ಆಯಾ ಸಂದರ್ಭದಲ್ಲಿ ಕಾನೂನಿನ ಚೌಕಟ್ಟಿನಲ್ಲಿಯೇ ಖರೀದಿ ಮಾಡಲಾಗಿದೆ. ಕೇವಲ ದುರುದ್ದೇಶದಿಂದ ಮಾತ್ರ ಪ್ರತಿಪಕ್ಷ ನಾಯಕರು ಅರೋಪ ಮಾಡುತ್ತಿದ್ದಾರೆಂದು ತಿರುಗೇಟು ನೀಡಿದರು.

ಕೋವಿಡ್ -19 ಉಪಕರಣಗಳ ಖರೀದಿಯಲ್ಲಿ 2,200 ಕೋಟಿ ರೂ. ಅವ್ಯವಹಾರ ನಡೆದಿದೆ ಎಂಬುದು ಪ್ರತಿಪಕ್ಷ ನಾಯಕರ ಕಪೋಲಕಲ್ಪಿತ ಊಹೆ ಮಾತ್ರ. ಕೇವಲ ಆರೋಪ ಮಾಡಲಿಕ್ಕೆ ಮಾತ್ರವೇ ಅವರು ಹೀಗೆ ಹೇಳಿರುವುದು ಎಂದು ಡಿಸಿಎಂ ಹೇಳಿದರೆ, ವೆಂಟಿಲೇಟರ್ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂದು ವಿಪಕ್ಷ ನಾಯಕರು ಆರೋಪಿಸಿರುವುದು ಸರಿಯಲ್ಲ. ನನ್ನ ಅವಧಿಯಲ್ಲಿ ಒಂದು ವೇಳೆ ಅವ್ಯವಹಾರ ನಡೆದಿದ್ದರೇ ಒಂದು ಕ್ಷಣವೂ ನಿಲ್ಲದೆ ರಾಜೀನಾಮೆ ನೀಡುತ್ತೇನೆ ಎಂದು ಶ್ರೀರಾಮುಲು ಸವಾಲು ಹಾಕಿದರು.

Related