ಬೆಂಗಳೂರು: ಆಗಸ್ಟ್ 7 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ ಎನ್ನಲಾಗಿತ್ತು. ಇದೀಗ ನಿಗಧಿಯಾಗಿದ್ದ ದಿನಾಂಕವನ್ನು ಮುಂದೂಡಲಾಗಿದೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಫಲಿತಾಂಶ ಪ್ರಕಟಣೆಯ ಬಗ್ಗೆ ಸರ್ಕಾರದಿಂದ ಅನುಮತಿಸಿಗದ ಕಾರಣ ದಿನಾಂಕವನ್ನು ಮುಂದೂಡಲಾಗಿದೆ. ಇನ್ನೆರೆಡು ದಿನಗಳಲ್ಲಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ.
ರಾಜ್ಯದಲ್ಲಿ ಹೊಸ ಸಚಿವ ಸಂಪುಟ ರಚನೆಯಾಗಿದ್ದರಿಂದ ಇನ್ನೂ ಖಾತೆ ಹಂಚಿಕೆಯಾಗಿಲ್ಲ, ಈ ಹಿನ್ನೆಲೆಯಲ್ಲಿ ಫಲಿತಾಂಶ ಪ್ರಕಟಣೆ ತಡೆವಾಗ ಬಹುವುದು ಎನ್ನಲಾಗಿದೆ.
ಈಗಾಗಲೇ ಮೌಲ್ಯಮಾಪನ ಪೂರ್ಣಗೊಂಡಿದ್ದು, ಫಲಿತಾಂಶ ಪ್ರಕಟಣೆಗೆ ಸಕಲ ತಯಾರಿಯೂ ನಡೆದಿದೆ ಎಂದು ಇಲಾಖೆ ತಿಳಿಸಿದೆ.