ಪಾಕಿಸ್ತಾನಿ ಪ್ರಜೆಗಳನ್ನು ಗಡಿಪಾರು ಮಾಡಲು ಕ್ರಮ ಕೈಗೊಂಡಿದೆ: ಸಿಎಂ

ಪಾಕಿಸ್ತಾನಿ ಪ್ರಜೆಗಳನ್ನು ಗಡಿಪಾರು ಮಾಡಲು ಕ್ರಮ ಕೈಗೊಂಡಿದೆ: ಸಿಎಂ

ಮಂಡ್ಯ: ಆಪರೇಷನ್ ಸಿಂಧೂರ ನಂತರ ಭಾರತ ಮತ್ತು ಪಾಕಿಸ್ತಾನಗಳ ನಡುವೆ ಮತ್ತಷ್ಟು ಹೆಚ್ಚುತ್ತಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ ರಾಜ್ಯದಾದ್ಯಂತ ಎಚ್ಚರಿಕೆಯನ್ನು ನೀಡಿದ್ದು ಮುನ್ನೆಚ್ಚರಿಕೆಯ ಕ್ರಮವಾಗಿ ಏನೆಲ್ಲಾ ತಯಾರಿ ಮಾಡಿಕೊಳ್ಳಬೇಕು ಅದನ್ನೆಲ್ಲ ನಮ್ಮ ಸರ್ಕಾರ ಈಗಾಗಲೇ ಮಾಡಿಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಎಲ್ಲ ರೀತಿ ಕ್ರಮ ತೆಗೆದುಕೊಂಡಿದ್ದೇವೆ ಯಾವುದೇ ರೀತಿ ತೊಂದರೆಯಾಗುತ್ತದೆ ಮುನ್ನೆಚ್ಚರಿಕೆ ಕ್ರಮ ವಹಿಸಿದ್ದೇವೆ ಎಂದು ಹೇಳಿದರು.

ರಾಜ್ಯದ ಅಣೆಕಟ್ಟುಗಳು ಮತ್ತು ಇತರ ಪ್ರಮುಖ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸುವುದರ ಜೊತೆಗೆ ನಾವು ಎಲ್ಲೆಡೆ ಎಚ್ಚರಿಕೆ ನೀಡಿದ್ದೇವೆ. ಏಕೆಂದರೆ, ಯಾವುದೇ ಸಮಯದಲ್ಲಿ ಏನು ಬೇಕಾದರೂ ಆಗಬಹುದು. ನಾವು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದೇವೆ ಎಂದರು. ಇದನ್ನೂ ಓದಿ:ಭಾರತೀಯ ಸೇನೆ ಕಾರ್ಯಾಚಾರಣೆ ಬಗ್ಗೆ ಹೆಮ್ಮೆಯಿದೆ: ಡಿಕೆಶಿ

ಎಲ್ಲ ಸ್ಥಳಗಳಲ್ಲಿ ಮಾಕ್ ಡ್ರಿಲ್‌ಗಳನ್ನು ನಡೆಸಲಾಗುತ್ತಿದೆ ಮತ್ತು ಕೇಂದ್ರವು ನೀಡಿದ ಸೂಚನೆಗಳನ್ನು ಅನುಸರಿಸಲಾಗುತ್ತಿದೆ ಎಂದು ಹೇಳಿದರು. ಕರ್ನಾಟಕದಲ್ಲಿ ಇರುವ ಕೆಲವು ಪಾಕಿಸ್ತಾನಿ ಪ್ರಜೆಗಳನ್ನು ಗಡಿಪಾರು ಮಾಡಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದ್ದು,ಬಹುತೇಕ ಎಲ್ಲರೂ ಹೋಗಿದ್ದಾರೆ. ಮೈಸೂರಿನ ಒಂದು ಕುಟುಂಬ ನ್ಯಾಯಾಲಯದ ಮೊರೆ ಹೋಗಿದೆ. ಅಂತಹ ಪ್ರಕರಣಗಳು ಮಾತ್ರ ಇನ್ನೂ ಇರಬಹುದು. ಇನ್ನುಳಿದ ಎಲ್ಲರೂ ಹೋಗಿದ್ದಾರೆ. ರಾಜ್ಯದಲ್ಲಿ ಇನ್ನೂ ಎಷ್ಟು ಪಾಕಿಸ್ತಾನಿಗಳಿದ್ದಾರೆ ಎಂಬುದರ ಬಗ್ಗೆ ನನಗೆ ನಿಖರವಾದ ಮಾಹಿತಿ ಇಲ್ಲ ಎಂದು ಹೇಳಿದರು.

Related