ಪಕ್ಷ ಸಂವರ್ಧನೆಗೆ ಶ್ರಮಿಸಿ : ಸತೀಶ್ ಜಾರಕಿಹೊಳಿ

ಪಕ್ಷ ಸಂವರ್ಧನೆಗೆ ಶ್ರಮಿಸಿ : ಸತೀಶ್ ಜಾರಕಿಹೊಳಿ

ರಾಮದುರ್ಗ : ಕಾಂಗ್ರೆಸ್ ಪಕ್ಷ ಕೈಗೊಂಡ ಕೆಲಸಗಳನ್ನು ಜನ ಮರೆತಿಲ್ಲವೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನುಡಿದರು.

ಅಧಿಕಾರ ಸ್ವೀಕರಿಸಿದ ನಂತರ ಪ್ರಥಮ ಬಾರಿಗೆ ರಾಮದುರ್ಗಕ್ಕೆ ಆಗಮಿಸಿದ ಸತೀಶ ಜಾರಕಿಹೊಳಿರವರಿಗೆ ಮಾಜಿ ಶಾಸಕ ಅಶೋಕ ಪಟ್ಟಣ ಅವರ ನಿವಾಸದಲ್ಲಿ ಸನ್ಮಾನವನ್ನೇರ್ಪಡಿಸಲಾಗಿತ್ತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಪಕ್ಷದ ಎಲ್ಲ ಪದಾಧಿಕಾರಿಗಳ ಸಂಘಟನೆಗೆ ಹೆಚ್ಚಿನ ಮಹತ್ವ ನೀಡಬೇಕು. ಯಾರು ಏನೇ ಹೇಳಲಿ ಕಾಂಗ್ರೆಸ್ ಪಕ್ಷ ಬಡವರಿಗೆ ಮಾಡಿದ ಕಲ್ಯಾಣ ಕೆಲಸ ತಿಳಿಸುವಲ್ಲಿ ಕಾರ್ಯಕರ್ತರು ಮುಂದಾಗಬೇಕು. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬಡವರಿಗೆ ಉಚಿತ ರೇಶನ್ ನೀಡಿದ್ದಾರೆ. ಬಡವರ ಕಲ್ಯಾಣಕ್ಕಾಗಿ ಹಲವಾರು ಯೋಜನೆ ರೂಪಿಸಿದ ಅವರ ಕರ‍್ಯವನ್ನು ಜನ ಮರೆತಿಲ್ಲಾ. ಮುಂಬರುವ ಚುನಾವಣೆಗೆ ಪಕ್ಷ ಯಾರಿಗೆ ಟಿಕೇಟ್ ನೀಡಲಿ, ಪಕ್ಷದ ಅಭ್ಯರ್ಥಿಯ ಗೆಲುವಿಗೆ ಕಾರ್ಯಕರ್ತರು ಶ್ರಮಿಸಬೇಕೆಂದರು.

ಮಾಜಿ ಶಾಸಕ ಅಶೋಕ ಪಟ್ಟಣ ಮಾತನಾಡಿ, ತಾಲೂಕು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಾವಿರಾರು ಕೋಟಿ ಅನುದಾನ ತಂದು ಕಾಮಗಾರಿ ಕೈಗೊಳ್ಳಲಾಗಿದೆ. ಬರುವ ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಕಾರ್ಯಕರ್ತರು ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು. ತಾವು ಸಹ ಗ್ರಾಮಗಳಿಗೆ ತೆರಳಿ ಪಕ್ಷದ ಮುಖಂಡರನ್ನು ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡಿ ಪಕ್ಷ ಸಂಘಟನೆಗೆ ಮುಂದಾಗುವದಾಗಿ ಹೇಳಿದರು.

 

Related