ಹೊಟ್ಟೆ ನೋವು ತಾಳಲಾರದೆ ವಿದ್ಯಾರ್ಥಿ ಆತ್ಮಹತ್ಯೆ

ಹೊಟ್ಟೆ ನೋವು ತಾಳಲಾರದೆ ವಿದ್ಯಾರ್ಥಿ ಆತ್ಮಹತ್ಯೆ

ಸೇಡಂ  : ಸೇಡಂ ತಾಲೂಕಿನ ನಾರಾಯಣಪಲ್ಲಿ ಗ್ರಾಮದಲ್ಲಿ ಮಹೊಟ್ಟ ನೋವು ತಾಳಲಾರದೆ ವಿದ್ಯಾರ್ಥಿನೋರ್ವ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಅರುಣ್ ತಂದೆ ನರೇಶ್ ತಲಾರಿ(16) ಸಾವನಪ್ಪಿದ ದುರ್ದೈವಿ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ರಿಬ್ಬನಪಲ್ಲಿ ಸರ್ಕಾರಿ ಪ್ರೌಢ ಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದ ಅರುಣ್ ನಾಲ್ಕು ತಿಂಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಪಾಲಕರು ಖಾಸಗಿ ಆಸ್ಪತ್ರೆಗೆ ತೋರಿಸಿದರು ಗುಣಮುಖವಾಗದೆ.

ಬುಧವಾರದಂದು ತೀವ್ರವಾಗಿ ಹೊಟ್ಟೆ ನೋವು ಕಾಣಿಸಿಕೊಂಡ ಪರಿಣಾಮ ಸಾಯಂಕಾಲ ವಿದ್ಯಾರ್ಥಿಯು ಜಮೀನು ಕಾಯಲು ಹೋಗಿ ಶೇಂಗಾ ಬೆಳೆಗೆ ಸಿಂಪಡಿಸಲು ತಂದಿದ್ದ ಕೀಟನಾಶ ಕುಡಿದ್ದು, ಕುಟುಂಬದವರಿಗೆ ಮಾಹಿತಿ ತಿಳಿದ ತಕ್ಷಣ ಯುವಕನನ್ನು ಮುಧೋಳ್ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯನ್ನು ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಸೇಡಂನ ತಾಲೂಕು ಸರ್ಕಾರಿ ಆಸ್ಪತ್ರೆಗೆ ರವಾನಿಸುವ ಮಾರ್ಗ ಮಧ್ಯದಲ್ಲಿಯೆ ಕೊನೆಯುಸಿರು ಎಳೆದಿದ್ದಾನೆಂದು ತಿಳಿದು ಬಂದಿದೆ.

ಈ ಪ್ರಕರಣ ಮುಧೋಳ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ

Related