ಬೆಂಗಳೂರು: ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಜಯಭೇರಿಯನ್ನು ಸಾಧಿಸಿದ ಸುಮಲತಾ ಅಂಬರೀಶ್ ಅವರಿಗೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಸುಮಲತಾ ಅವರಿಗೆ ಟಿಕೆಟ್ ನೀಡಿದ ಕಾರಣ ನಾಳೆ ಎಪ್ರಿಲ್ 03ರಂದು ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಅವರು ತಮ್ಮ ಮುಂದಿನ ನಡೆಯನ್ನು ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
ಜೆಪಿ ನಗರ ನಿವಾಸದ ಬಳಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದ ಸುಮಲತಾ ಅಂಬರೀಶ್, ಎಲ್ಲಿಯೂ ಮುಂದಿನ ನಡೆ ಏನು ಎಂಬುದರ ಗುಟ್ಟನ್ನು ಬಿಟ್ಟುಕೊಡಲಿಲ್ಲ. ಏಪ್ರಿಲ್ 3ರಂದು ಮಂಡ್ಯಕ್ಕೆ ಬಂದು, ಅಲ್ಲಿಯೇ ಚರ್ಚಿಸಿ ನನ್ನ ನಿರ್ಧಾರವನ್ನು ಪ್ರಕಟಿಸುತ್ತೇನೆ ಎಂದು ಹೇಳಿದರು.
ಈ ಬಗ್ಗೆ ಇಂದು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ತಮ್ಮ ಮುಂದಿನ ನಡೆ ಏನು ಎಂದು ಬರೆದುಕೊಂಡಿದ್ದಾರೆ. ನಾಳೆ ಬೆಳಗ್ಗೆ 10.30ಕ್ಕೆ ನನ್ನ ನಿರ್ಧಾರ ತಿಳಿಸುತ್ತೇನೆ ನಿಮ್ಮ ನಡೆಯೇ ನನ್ನ ನಡೆ ಎಂದು ಬರೆದುಕೊಂಡಿದ್ದಾರೆ.