ಸ್ವಾಮೀಜಿ ಕೋವಿಡ್‌ಗೆ ಬಲಿ

ಸ್ವಾಮೀಜಿ ಕೋವಿಡ್‌ಗೆ ಬಲಿ

ಮೈಸೂರು : ಜಿಲ್ಲೆ ಕೆ.ಆರ್ ನಗರದ ಚುಂಚನಕಟ್ಟೆಯ ಆದಿಚುಂಚನಗಿರಿ ಶಾಖಾ ಮಠದ ಶಿವಾನಂದ ಸ್ವಾಮೀಜಿ ಕೊರೋನಾಗೆ ಬಲಿಯಾಗಿದ್ದಾರೆ.

ಎರಡು ದಿನದ ಹಿಂದೆ ಕೊರೋನಾ ಸೋಂಕು ತಗುಲಿದ್ದು, ಮಂಡ್ಯ ಜಿಲ್ಲೆಯ ನಾಗಮಂಗಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ಶಿವಾನಂದ ಸ್ವಾಮೀಜಿ (62) ಮೃತಪಟ್ಟಿದ್ದಾರೆ.

ಕಳೆದ 25 ವರ್ಷಗಳಿಂದ ಆದಿಚುಂಚನಗಿರಿ ಶಾಖಾ ಮಠದಲ್ಲಿ ಸ್ವಾಮೀಜಿಯಾಗಿದ್ದರು. ವಿವಿಧ ವಿದ್ಯಾಸಂಸ್ಥೆಗಳು ಸೇರಿದಂತೆ ಮಠದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಸ್ವಾಮೀಜಿ ಮಾಡಿದ್ದರು.

Related