ಮತ್ತೆ ಪಡ್ಡೆ ಹುಡುಗರ ನಿದ್ದೆ ಕೆಡಿಸಲು ಬಂದ ಸ್ವೀಟಿ

ಮತ್ತೆ ಪಡ್ಡೆ ಹುಡುಗರ ನಿದ್ದೆ ಕೆಡಿಸಲು ಬಂದ ಸ್ವೀಟಿ

ಬೆಂಗಳೂರು: ಕಳೆದ ಹಲವಾರು ದಿನಗಳಿಂದ ಕನ್ನಡ ಚಿತ್ರರಂಗದಿಂದ ದೂರ ಇದ್ದಿದ್ದ ಸ್ವೀಟಿ ಎಂದು ಹೆಸರಾಗಿರುವ ರಾಧಿಕಾ ಕುಮಾರಸ್ವಾಮಿ ಅವರು ಅಜಾಗೃತ ಚಿತ್ರದ ಮೂಲಕ ಮತ್ತೆ ಪಡ್ಡೆ ಹುಡುಗರ ನಿದ್ದೆ ಕೆಡಿಸಲು ತೆರೆ ಮೇಲೆ ಮಿಂಚುತ್ತಿದ್ದಾರೆ.

ಹೌದು, ರಾಧಿಕಾ ಕುಮಾರಸ್ವಾಮಿ ಅವರು ನಾಯಕಿಯಾಗಿ ನಟಿಸುತ್ತಿರುವ ‘ಅಜಾಗ್ರತ’ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಹೈದರಾಬಾದ್ ನ ರಾಮನಾಯ್ಡು ಸ್ಟುಡಿಯೋದಲ್ಲಿ ನೆರವೇರಿತು.

ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕ ಎ.ಎಂ.ರತ್ನಂ ಚಿತ್ರದ ಪ್ರಥಮ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ಹೆಸರಾಂತ ವಿತರಕ ಟ್ಯಾಗೋರ್ ಮಧು ಕ್ಯಾಮೆರಾ ಚಾಲನೆ ಮಾಡಿದರು. ಚಿತ್ರರಂಗದ ವಿವಿಧ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.

ಬಾಲಿವುಡ್ ನ ಖ್ಯಾತ ನಟ ಶ್ರೇಯಸ್ ತಲ್ಪಾಡೆ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ರಾಧಿಕಾ ಕುಮಾರಸ್ವಾಮಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ರಾವ್ ರಮೇಶ್‌, ಸುನೀಲ್, ಆದಿತ್ಯ ಮೆನನ್, ರಾಘವೇಂದ್ರ ಶ್ರವಣ್, ದೇವರಾಜ್, ಜಯಪ್ರಕಾಶ್, ವಿನಯಾಪ್ರಸಾದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

 

Related