ಕತ್ತಿಗೆ ರಾಜ್ಯಸಭೆಯ ಕನಸು

ಕತ್ತಿಗೆ ರಾಜ್ಯಸಭೆಯ ಕನಸು

ಬೆಂಗಳೂರು, ಫೆ. 13 : ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ ಶಾಸಕ ಉಮೇಶ್ ಕತ್ತಿ ರಾಜ್ಯಸಭಾ ಸದಸ್ಯ ಸ್ಥಾನ ನೀಡುವಂತೆ ಉಮೇಶ್ ಕತ್ತಿ ಬೇಡಿಕೆ ಇಟ್ಟಿದ್ದಾರೆಂದು ಹೇಳಲಾಗುತ್ತಿದೆ.
ಶಾಸಕ ಉಮೇಶ್ ಕತ್ತಿ, ಸಹೋದರ ರಮೇಶ್ ಕತ್ತಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ ಮಾಡಿ  ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ ಇಬ್ಬರೂ ಸಹೋದರರು ತಮಗಾದ ಅನ್ಯಾಯ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಬಳಿ ಹಂಚಿಕೊಂಡಿದ್ದಾರೆ.
ಲೋಕಸಭೆ ಚುನಾವಣೆ ವೇಳೆ ರಮೇಶ್ ಕತ್ತಿ ಅವರಿಗೆ ಟಿಕೆಟ್ ನೀಡದೆ ಸಚಿವೆ ಅಣ್ಣಾಸಾಹೇಬ್ ಜೊಲ್ಲೆ ಅವರಿಗೆ ನೀಡಿದ್ದ ವಿಚಾರವನ್ನು ಪ್ರಸ್ತಾಪಿಸಿ ರಾಜ್ಯಸಭಾ ಸದಸ್ಯ ಸ್ಥಾನ ನೀಡುವಂತೆ ಉಮೇಶ್ ಕತ್ತಿ ಬೇಡಿಕೆ ಇಟ್ಟಿದ್ದಾರೆಂದು ಹೇಳಲಾಗುತ್ತಿದೆ.
ಇದಕ್ಕೂ ಮುನ್ನ ರಾಷ್ಟ್ರೀಯ ಸಂಘಟನೆ ಕಾರ್ಯದರ್ಶಿ ಸಂತೋಷ್ ಅವರನ್ನು ಭೇಟಿಯಾಗಿ ಅರ್ಧಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು. ಗೃಹ ಸಚಿವ ಅಮಿತ್ ಶಾ ಅವರನ್ನು ಗುರುವಾರ ಭೇಟಿಯಾಗಲಿದ್ದು, ಅವರೊಂದಿಗೆ ಸಚಿವ ಸ್ಥಾನ ತಪ್ಪಿರುವ ಕುರಿತು ಮಾತಿಕತೆ ನಡೆಸಲಿದ್ದಾರೆಂದು ತಿಳಿದುಬಂದಿದೆ.

Related