ಅಕ್ರಮ ಸಂಬಂಧಕ್ಕೆ ಟೀಚರ್ ಬಲಿ..!

ಅಕ್ರಮ ಸಂಬಂಧಕ್ಕೆ ಟೀಚರ್ ಬಲಿ..!

ಮೈಸೂರು, ಜು 04 : ಮೈಸೂರಿನ ನಂಜನಗೂಡಿನಲ್ಲಿ ಆರು ತಿಂಗಳ ಹಿಂದೆ ನಡೆದಿದ್ದ ಹಿಂದಿ ಶಿಕ್ಷಕಿ ಕೊಲೆ ರಹಸ್ಯ ಬೇಧಿಸುವಲ್ಲಿ ನಂಜನಗೂಡು ಪೊಲೀಸರು ಯಶಸ್ವಿಯಾಗಿದ್ದಾರೆ. ನಂಜನಗೂಡು ನಗರಸಭೆ ಸದಸ್ಯೆ ಸೇರಿದಂತೆ ನಾಲ್ವರನ್ನ ಪೊಲೀಸರು ಬಂಧಿಸಿದ್ದಾರೆ.

ಶಿಕ್ಷಕಿಯೊಂದಿಗೆ ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತಿದ್ದ ನಗರಸಭೆ ಸದಸ್ಯೆ ಸುಪಾರಿ ಕೊಟ್ಟು ಕೊಲೆ ಮಾಡಿಸಿರುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. 5 ನೇ ವಾರ್ಡಿನಿಂದ ನಗರಸಭೆಗೆ ಆಯ್ಕೆಯಾದ ಸದಸ್ಯೆ ಗಾಯಿತ್ರಿ ಪ್ರಮುಖ ಆರೋಪಿ. ಆರೋಪಿಗೆ ಸಹಕರಿಸಿದ ಭಾಗ್ಯ,ನಾಗಮ್ಮ ಮತ್ತು ಕುಮಾರ್ ನನ್ನು ಬಂಧಿಸಲಾಗಿದೆ.

ಮಾರ್ಚ್ 9 ರಂದು ಹಿಂದಿ ಶಿಕ್ಷಕಿ ಸುಲೋಚನಾ ಎಂಬವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು ತನಿಖೆ ನಡೆಸಿದ ಪೊಲೀಸರು ಕೊಲೆ ಮೊಕದ್ದಮೆ ದಾಖಲಿಸಿದ್ರು. ಬಂಧಿತ ಗಾಯಿತ್ರಿ ಪತಿ ಮುರುಗೇಶ್ ಹಾಗೂ ಶಿಕ್ಷಕಿ ಸುಲೋಚನಾ ನಡುವೆ ಅಕ್ರಮ ಸಂಬಂಧ ಇತ್ತೆಂದು ಹೇಳಲಾಗಿದೆ.

Related