ದೆಹಲಿ: ಟೀಮ್ ಇಂಡಿಯಾ ಆಟಗಾರರು 17 ವರ್ಷಗಳ ನಂತರ ಮತ್ತೆ ಇದೀಗ ಟಿ 20 ವಿಶ್ವಕಪ್ ಅನ್ನು ತನ್ಮ ಮುಡಿಗೇರಿಸಿಕೊಂಡಿದ್ದು, ಇದೀಗ ಭಾರತ ತಂಡದ ಆಟಗಾರರು ಭಾರತಕ್ಕೆ ಮರಳಿರುವುದರಿಂದ ಎಲ್ಲೆಡೆ ಸಂಭ್ರಮಾಚರಣೆ ಮಾಡಲಾಗುತ್ತಿದೆ.
ಹೌದು, ಟೀಮ್ ಇಂಡಿಯಾ ಆಟಗಾರರು ಬಾರ್ಬಡೋಸ್ನಿಂದ ದೆಹಲಿಗೆ ಇಂದು ಆಗಮಿಸಿದ್ದಾರೆ. ಇದೀಗ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ರೋಜರ್ ಬಿನ್ನಿ ಅವರು ದೆಹಲಿಯ ಐಟಿಸಿ ಮೌರ್ಯ ಹೋಟೆಲ್ನಲ್ಲಿ ವಿಶ್ವ ಕಪ್ ಗೆದ್ದ ಖುಷಿಗೆ ಭಾರತ ತಂಡದ ಜತೆಗೆ ಕೇಕ್ ಕತ್ತರಿಸುವ ಮೂಲಕ ಸಂಭ್ರಮಾಚರಣೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಟೀಮ್ ಇಂಡಿಯಾ ಮುಂದಿನ ಟಾರ್ಗೆಟ್ ಏನು ಗೊತ್ತಾ..?
ನಂತರ ಭಾರತ ತಂಡವು 12.00ಗಂಟೆಗೆ ಪ್ರಧಾನಿ ಮೋದಿ ಅವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ಈ ಸಂಭ್ರಮದಲ್ಲಿ ವಿರಾಟ್, ರೋಹಿತ್, ಹಾರ್ದಿಕ್ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಭಾಗವಹಿಸಿದ್ದಾರೆ. ಕೋಚ್ ರಾಹುಲ್ ದ್ರಾವಿಡ್ ಕೇಕ್ ಕಟ್ ಮಾಡುವ ಮೂಲಕ ಇಂಡಿಯಾ ತಂಡದ ಸಂಭ್ರಮವನ್ನು ಹೆಚ್ಚಿಸಿದ್ದಾರೆ. ಇನ್ನು ಇಂದು ಸಂಜೆ 5 ಗಂಟೆಗೆ ಮುಂಬೈನಲ್ಲಿ ಮರೈನ್ ಡ್ರೈವ್ ಮತ್ತು ಐಕಾನಿಕ್ ವಾಂಖೆಡೆ ಸ್ಟೇಡಿಯಂನಲ್ಲಿ ಸಂಭ್ರಮಾಚರಣೆ ಮಾಡಲಿದ್ದಾರೆ. ಭಾರತ ಶನಿವಾರದಂದು ದಕ್ಷಿಣ ಆಫ್ರಿಕಾವನ್ನು ಏಳು ರನ್ಗಳಿಂದ ಸೋಲಿಸಿ, ವಿಜಯವನ್ನು ಸಾಧಿಸಿತ್ತು.