ಬುಲ್ಡೋಜರ್ ಬಾಬಾ ಸಕ್ಕರೆ ನಾಡಿನಲ್ಲಿ ಕಮಲ ಅರಳಿಸಲು ತಂತ್ರ

ಬುಲ್ಡೋಜರ್ ಬಾಬಾ ಸಕ್ಕರೆ ನಾಡಿನಲ್ಲಿ ಕಮಲ ಅರಳಿಸಲು ತಂತ್ರ

ಮಂಡ್ಯ: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ  ಕ್ಷಣ ಕ್ಷಣಕ್ಕೂ ರಂಗೇರಿತಿದ್ದು, ಬಿಜೆಪಿ ಪಕ್ಷದ ಅಭ್ಯರ್ಥಿಯ ಪರವಾಗಿ ಸಕ್ಕರೆ ನಾಡು ಮಂಡ್ಯದಲ್ಲಿ ಯುಪಿ ಮುಖ್ಯಮಂತ್ರಿ ಆಗಿರುವ ಯೋಗಿ ಆದಿತ್ಯನಾಥ್ ಅವರು ಇಂದು ಪ್ರಚಾರ ಕಾರ್ಯ ಕೈಗೊಂಡಿದ್ದಾರೆ.

ಬಿಜೆಪಿ ಮತ್ತು ಕಾಂಗ್ರೆಸ್ ನಲ್ಲಿ ದೇಶ ಮಟ್ಟದ ಸ್ಟಾರ್ ಪ್ರಚಾರಕರ ಎಂಟ್ರಿಯಾಗುತ್ತಿದೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು ಸಕ್ಕರೆ ನಾಡು ಮಂಡ್ಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹಳೆ ಮೈಸೂರು ಭಾಗದಲ್ಲಿಈ ಬಾರಿ ಚುನಾವಣೆಯಲ್ಲಿ ಕಮಲ ಅರಳಿಸಲು ಕೇಸರಿ ಪಡೆ ಹಲವು ಪ್ರಯತ್ನಗಳು, ತಂತ್ರಗಳನ್ನು ಮಾಡುತ್ತಿದೆ. ಈ ನಿಟ್ಟಿನಲ್ಲಿ ದೇಶ ಮಟ್ಟದಲ್ಲಿ ಬಿಜೆಪಿಯ ವರ್ಚಸ್ವಿ ನಾಯಕ ಬುಲ್ಡೋಜರ್ ಬಾಬಾ ಎಂದೇ ಕರೆಯಲ್ಪಡುವ ಯೋಗಿ ಆದಿತ್ಯನಾಥ್ ಅವರ ರೋಡ್ ಶೋ ಆರಂಭವಾಗಿದೆ.

 

Related