ಭರ್ಜರಿ ಮತ ಪ್ರಚಾರದಲ್ಲಿ ತೊಡಗಿದ ತೇಜಸ್ವಿ ಸೂರ್ಯ

ಭರ್ಜರಿ ಮತ ಪ್ರಚಾರದಲ್ಲಿ ತೊಡಗಿದ ತೇಜಸ್ವಿ ಸೂರ್ಯ

ಬೆಂಗಳೂರು: ಲೋಕಸಭಾ ಚುನಾವಣೆಯ ಪ್ರಯುಕ್ತ ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿಯಾಗಿರುವ ತೇಜಸ್ವಿ ಸೂರ್ಯ ಅವರು ಇಂದು ಭರ್ಜರಿ ಮತಯಾಚನೆ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಹಿರಿಯ ಬಿಜೆಪಿ ಮುಖಂಡರು ಮತ್ತು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಹೊಂಗಸಂದ್ರದ ಹಿರಿಯ ಬಿಜೆಪಿ ಮುಖಂಡರುಗಳ ಮನೆಗೆ ತೆರಳಿ ಆಶೀರ್ವಾದ ಪಡೆದು ಮತಯಾಚನೆ ಮಾಡಿದ್ದೇನೆ ಎಂದು ಹೇಳಿದರು.

ಇನ್ನು ಬೆಂಗಳೂರು ದಕ್ಷಿಣ ಲೋಕಸಭಾದಲ್ಲಿ ನನಗೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವಂತಹ ಎಂ ಸತೀಶ್ ರೆಡ್ಡಿ ಅವರು ನನಗೆ ಬೆನ್ನೆಲುಬಾಗಿ ನಿಂತಿದ್ದಾರೆ ಎಂದು ತೇಜಸ್ವಿ ಸೂರ್ಯ ಅವರು ಹೇಳಿದರು.

ಹೊಂಗಸಂದ್ರದ ಹಿರಿಯ ಬಿಜೆಪಿ ಮುಖಂಡರ ಮನೆಗಳಿಗೆ ಮತ್ತು ನಾಗರಿಕರ ಭೇಟಿ ಮಾಡಿ, ಅವರ ಆಶೀರ್ವಾದದ ನುಡಿಗಳ ಮೂಲಕ  ಶುರುವಾದ ಇಂದಿನ ಚುನಾವಣಾ ಮತಯಾಚನೆ ಕಾರ್ಯದಲ್ಲಿ, ಸಾರ್ವಜನಿಕರು ನರೇಂದ್ರ ಮೋದಿ ರವರನ್ನು 3ನೇ ಬಾರಿಗೆ ಪ್ರಧಾನಿಯನ್ನಾಗಿ ಕಾಣುವ ಹುಮ್ಮಸ್ಸು ಹೊಂದಿರುವುದು ಅತ್ಯಂತ ಸ್ಪಷ್ಟ ಎಂದು ಹೇಳಿದರು.

ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿಯು ಈ ಬಾರಿ ಅತೀ ಹೆಚ್ಚಿನ ಮತಗಳ ಅಂತರದಲ್ಲಿ ವಿಜಯ ದಾಖಲಿಸಲಿ ರುವುದು ಜನರ ಮನದಾಳವಾಗಿದೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಮುಖಂಡರು ಮತ್ತು ಸ್ಥಳೀಯರು ಭಾಗಿಯಾಗಿದ್ದರು.

Related