ಬೆಂಗಳೂರು, ಜೂ 07 : ನಗರದಲ್ಲಿ ನೆಲೆಸಿದ್ದ ಶಂಕಿತ ಉಗ್ರ ತಾಲಿಬ್ ಹುಸೇನ್ ಎಂಬಾತನನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಂಕಿತ ಉಗ್ರ ಬೆಂಗಳೂರಲ್ಲಿ ತಾಲಿಕ್ ಎಂದು ಹೆಸರು ಬದಲಿಸಿಕೊಂಡು ಓಡಾಡುತ್ತಿದ್ದ.
ತಾಲಿಬ್ ಹುಸೇನ್ ಬಿಎನ್ಎಲ್ ಏರ್ ಸರ್ವಿಸ್ ಲೋಡಿಂಗ್ ಅನ್ಲೋಡಿಂಗ್ ಕೆಲಸ ಮಾಡಿಕೊಂಡಿದ್ದ. ಬೆಂಗಳೂರಿನಲ್ಲಿ ಪತ್ನಿ ಮತ್ತು 3 ಜನ ಮಕ್ಕಳೊಂದಿಗೆ ವಾಸವಿದ್ದ. ಈತನಿಗೆ ಓಕಳಿಪುರಂ ಮಸೀದಿ ಮುಖ್ಯಸ್ಥ ಅನ್ವರ್ ಪಾಷ ಎಂಬುವವರು ಆಶ್ರಯ ನೀಡಿದ್ದರು. ತಾಲಿಬ್ ಹುಸೇನ್ ಮಸೀದಿಯಲ್ಲಿ ಪಾಠ, ಪ್ರವಚನ ಮಾಡುತ್ತಿದ್ದ ಅನ್ನೋ ಶಂಕೆ ವ್ಯಕ್ತವಾಗಿದೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಾಲಿಬ್ ಹುಸೇನ್ನನ್ನು ಕರೆದೊಯ್ದ ಸಿಸಿಟಿವಿ ದೃಶ್ಯ ಲಭ್ಯವಾಗಿದೆ. ಮೇ 29ರ ರಾತ್ರಿ 10.50ಕ್ಕೆ ಆರೋಪಿಯನ್ನು ಬಂಧಿಸಿ ಕರೆದೊಯ್ಯಲಾಗಿದೆ.