ರಾಯಚೂರು: ಪ್ರತಿಯೊಂದು ಶಾಲಾ ಕಾಲೇಜುಗಳಲ್ಲಿ ಬಾಗಿಲ ಮುಂದೆ ಇದು ಜ್ಞಾನ ದೇಗುಲ ಕೈಮುಗಿದು ಒಳಗೆ ಬಾ ಎಂಬ ಬರಹವನ್ನು ಬರೆದಿರುತ್ತಾರೆ.
ಇಂತ ಜ್ಞಾನ ದೇಗುಲದಲ್ಲಿ ಶಿಕ್ಷಕನೊಬ್ಬನು ಸಹ ಶಿಕ್ಷಕಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಇದೀಗ ಬೆಳಕಿಗೆ ಬಂದಿದ್ದು ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನಿಗೆ ಈಗ ಹಿಗ್ಗಾಮುಗ್ಗ ತಳಿಸಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ಹೌದು, ರಾಯಚೂರು ಜಿಲ್ಲೆಯ ಹೊರವಲಯದಲ್ಲಿರುವ ಆದರ್ಶ ಸರ್ಕಾರಿ ಶಾಲೆಯಲ್ಲಿ ಸಹ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದ ಮಹಬೂಬ್ ಅಲಿ ಎಂಬುವವ ಸಹ ಶಿಕ್ಷಕಿಗೆ ಅಶ್ಲೀಲವಾಗಿ ಮೆಸೇಜು ಕಳಿಸಿ ಶಾಲಾ ತರಗತಿಯಲ್ಲಿ ಅಸಭವಾಗಿ ನಡೆದುಕೊಳ್ಳುತ್ತಿದ್ದ ಎಂಬ ಘಟನೆಗೆ ಸಂಬಂಧಿಸಿದಂತೆ ಶಿಕ್ಷಕಿ ತಮ್ಮ ಸಂಬಂಧಿಕರು ಮತ್ತು ಶಾಲಾ ಸಿಬ್ಬಂದಿಗಳಿಗೆ ಮಾಹಿತಿ ಮೇರೆಗೆ ಮೆಹಬೂಬ್ ಅಲಿ ಎಂಬುವವರನ್ನು ಮೈ ಮೇಲಿರುವ ಬಟ್ಟೆ ಹರಿದುಹೋಗುವಂತೆ ಹಿಗ್ಗಾಮುಗ್ಗ ಥಳಿಸಿದ್ದಾರೆ. ಇದನ್ನೂ ಓದಿ: ಹುಡುಗರೇ ಕಣ್ ಹೊಡೆಯುವ ಮುನ್ನ ಇರಲಿ ಎಚ್ಚರ, ಎಚ್ಚರ!
ಇನ್ನು ಹಿಗ್ಗಾಮುಗ್ಗ ಥಳಿಸಿ ಶಿಕ್ಷಕಿಯ ಕಾಲಿಗೆ ಬೀಳಿಸಿ ಕ್ಷಮೆ ಕೇಳಿಸಲಾಗಿದೆ. ಸಹ ಶಿಕ್ಷಕ ಮೆಹಬೂಬ್ ಅಲಿ ಅವರು ತಮ್ಮದೇ ಶಾಲೆಯ ಅತಿಥಿ ಶಿಕ್ಷಕಿಗೆ ಅಸಹ್ಯವಾಗಿ ಮೆಸೇಜ್ ಮಾಡಿ, ಮಂಚಕ್ಕೆ ಕರೆದಿದ್ದರು. ಈ ಹಿನ್ನೆಲೆ ನಿನ್ನೆ ಶಾಲೆ ಬಳಿ ಬಂದಿದ್ದ ಶಿಕ್ಷಕಿ ಸಂಬಂಧಿಕರು ಮೆಹಬೂಬ್ ಅಲಿ ಮೈ ಮೇಲಿದ್ದ ಬಟ್ಟೆ ಹರಿಯುವಂತೆ ಧರ್ಮದೇಟು ನೀಡಿ ಸಭ್ಯತೆಯ ಪಾಠ ಕಳಿಸಿದ್ದಾರೆ. ಕೊನೆಗೆ ತಪ್ಪೊಪ್ಪಿಗೆ ಪತ್ರ ಬರೆದು ಕ್ಷಮೆ ಕೇಳಿದ್ದಾರೆ. ಶಿಕ್ಷಕ ಕ್ಷಮೆಯಾಚಿಸಿದ್ದರಿಂದ ಪೊಲೀಸರಿಗೆ ದೂರು ನೀಡದೇ ಶಿಕ್ಷಕಿ ಸುಮ್ಮನಾಗಿದ್ದಾರೆ. ಇದೀಗ ಶಿಕ್ಷಕ, ಶಿಕ್ಷಕಿ ಕಾಲಿಗೆ ಬಿದ್ದು ಕ್ಷಮೆ ಕೇಳಿದ್ದಾರೆ