ಬಂದ್ ಗೆ ಕೊಪ್ಪಳದಲ್ಲಿ ನೀರಸ ಪ್ರತಿಕ್ರಿಯೆ

  • In State
  • February 13, 2020
  • 479 Views
ಬಂದ್ ಗೆ ಕೊಪ್ಪಳದಲ್ಲಿ ನೀರಸ ಪ್ರತಿಕ್ರಿಯೆ

ಕೊಪ್ಪಳ, . 13: ಜಿಲ್ಲಾ ಕೇಂದ್ರ ಸೇರಿದಂತೆ ಜಿಲ್ಲೆಯಲ್ಲಿ ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ನೀಡಿದ್ದ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್ ಹಿನ್ನಲೆಯಲ್ಲಿ ಇಲ್ಲಿ ಯಾವ ಟ್ಯಾಕ್ಸಿ ಆಗಲಿ, ಬಸ್, ಖಾಸಗಿ ಬಸ್, ಆಟೋ ಸೇರಿದಂತೆ ಎಂದಿನಂತೆ ಸಂಚಾರದಲ್ಲಿವೆ. ಜನಜೀವನ ಕೂಡಾ ಎಂದಿನಂತೆ ಕಂಡುಬರುತ್ತಿದೆ. ಯಾವುದೇ ಅಹಿತಕರ ಘಟನೆ ಜರುಗದ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ದೃಷ್ಟಿಯಿಂದ ಪೊಲೀಸ್ ಬಂದೋ ಬಸ್ತ್ ಕೈಗೊಳ್ಳಲಾಗಿದೆ. ಯಾವುದೇ ಸಂಘಟನೆಗಳು ಕೂಡಾ ಬಂದ್ ಗೆ ಪ್ರತಿಕ್ರಿಯೆ ನೀಡಲು ಮುಂದೆ ಬಂದಿಲ್ಲ.

Related