ಭರವಸೆ ಈಡೇರಿಸುವಲ್ಲಿ ಕೇಂದ್ರ ಸರ್ಕಾರ ವಿಫಲ

ಭರವಸೆ ಈಡೇರಿಸುವಲ್ಲಿ ಕೇಂದ್ರ ಸರ್ಕಾರ ವಿಫಲ

ಮೂಡಲಗಿ: ಆಸ್ಪತ್ರೆಯೊಂದರಲ್ಲಿ ಜನಿಸಿದ ಅಂಬಾನಿಯ ಮೊಮ್ಮಗನ್ನು ನೋಡಲು ಪ್ರಧಾನಿ ಮೋದಿಗೆ ಸಮಯವಿದೆ ಆದರೆ ಧರಣಿ ನಿರತ ರೈತರನ್ನು ಮಾತನಾಡಿಸಿ ಬರಲು ಇವರಿಗೆ ಸಮಯವೇ ಸಾಲುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಗ್ರಹ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಪಟ್ಟಣದ ಶಿವಬೋಧರಂಗ ಬ್ಯಾಂಕ ಸಂಭಾಗಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಪರ ಮತಯಾಚನೆ ವೇಳೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ರೈತ ವಿರೋಧಿ ಮಸೂದೆಗಳನ್ನು ಜಾರಿಗೆ ತಂದಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಜನರಿಗೆ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಗಳಿಂದ ನಾಗರಿಕರು ತೀವ್ರ ಸಂಕಷ್ಟದಲ್ಲಿ ಜೀವನ ಸಾಗಿಸುತ್ತಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಕೃಷ್ಣರಾಜು, ಎಸ್. ಮನೋಹರ, ಎಮ್.ಎ. ಸಲೀಮ್, ವಿ. ಶಂಕರ್, ಜಿ. ಜರ್ನಾಧನ್, ಎ.ಆನಂದ, ಪುಟ್ಟುರಾಜು, ಕೆ.ಟಿ. ಗಾಣಿಗೇರ ಉಪಸ್ಥಿತರಿದ್ದರು.

Related