ತುಮಕೂರು ಜು22: ಮುಖ್ಯಮಂತ್ರಿ ಕುರ್ಚಿಗೆ ಟವಲ್ ಹಾಕಿಕೊಂಡು ನಾನು ಕುಳಿತಿಲ್ಲ. ಜನತೆ ನೀಡುವ ತೀರ್ಪಿಗೆ ಎಲ್ಲರೂ ಬದ್ದವಾಗಿರುವುದಾಗಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಶಿರಾ ನಗರದ ಗ್ರಾಮ ದೇವತೆ ದುರ್ಗಮ್ಮ ದೇವಸ್ಥಾನಕ್ಕೆ ಶುಕ್ರವಾರ ಭೇಟಿ ನೀಡಿ ಪೂಜೆ ಸಲ್ಲಿಸಿ ಮಾತನಾಡಿದರು, ಮುಖ್ಯಮಂತ್ರಿ ಕುರ್ಚಿಗೆ ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ಹೋರಾಟ ನಡೆಯುತ್ತಿಲ್ಲ, ಬಿಜೆಪಿ ಪಕ್ಷದಲ್ಲಿ ಸಹ ಹೋರಾಟ ನಡೆಯುತ್ತಿದೆ.
ಎಲ್ಲಾ ಪಕ್ಷಗಳಲ್ಲೂ ಇದು ಸರ್ವೇ ಸಾಧಾರಣ. ಚುನಾವಣೆಯಲ್ಲಿ ಜನತೆ ನೀಡುವ ತೀರ್ಪಿಗೆ ಎಲ್ಲರೂ ಬದ್ದವಾಗಬೇಕಾಗುವುದು ಎಂದರು.
ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಬಿ’ ರಿಪೋರ್ಟ್ ಸಲ್ಲಿಸಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಕ್ಲಿನ್ ಚಿಟ್ ನೀಡುತ್ತಾರೆ ಎನ್ನುವ ಸಂದೇಹ ಮೊದಲಿನಿಂದ ಇತ್ತು. ಸಂತೋಷ್ ಡೆತ್ ನೋಟ್ ನಲ್ಲಿ ಈಶ್ವರಪ್ಪ ಅವರ ಹೆಸರು ನಮೂದಿಸಿರುವ ದಾಖಲೆ ಇದ್ದರೂ ಸಹ ಸೂಕ್ತವಾಗಿ ತನಿಖೆ ನಡೆಸದೆ ಕ್ಲೀನ್ ಚಿಟ್ ನೀಡಲಾಗಿದ್ದು, ನ್ಯಾಯಾಂಗ ತನಿಖೆ ನಡೆಸಿದರೆ ಸತ್ಯ ಹೋರಬರಲಿದೆ ಎಂದು ಹೇಳಿದರು.