ದರ್ಶನ್ ತೂಗುದೀಪನ ಭವಿಷ್ಯ ತೂಗುಯ್ಯಾಲೆಯಲ್ಲಿ; ಪೊಲೀಸ್​ ಕಸ್ಟಡಿನಾ? ಜೈಲೇ ಗತಿನಾ?

ದರ್ಶನ್ ತೂಗುದೀಪನ ಭವಿಷ್ಯ ತೂಗುಯ್ಯಾಲೆಯಲ್ಲಿ; ಪೊಲೀಸ್​ ಕಸ್ಟಡಿನಾ? ಜೈಲೇ ಗತಿನಾ?

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ  ಕಳೆದ ಹತ್ತು ದಿನಗಳಿಂದ ದರ್ಶನ್ ಅಂಡ್ ಗ್ಯಾಂಗ್ ಪೊಲೀಸ್ ಕಸ್ಟಡಿಯಲ್ಲಿದ್ದರು. ಆದರಿಗ ಪೊಲೀಸ್ ಕಸ್ಟಡಿ ಅವಧಿ ಮೀರಿರುವುದರಿಂದ ನಟ ದರ್ಶನ್ ಗ್ಯಾಂಗಿಗೆ ಪರಪ್ಪನ ಅಗ್ರಹಾರ ಜೈಲೇ ಗತಿಯಾಗುತ್ತಾ ಅಥವಾ ಇನ್ನು ಸ್ವಲ್ಪ ದಿನಗಳ ನಂತರ ಪೊಲೀಸ ಅಧಿಕಾರಿಗಳ ಕಸ್ಟಡಿಗೆ ದರ್ಶನ್ ಅಂಡ್ ಗ್ಯಾಂಗ್ ಅನ್ನು ನೀಡುತ್ತಾರೆ ಎಂದು ಎಲ್ಲರಲ್ಲೂ ಪ್ರಶ್ನೆ ಮೂಡಿದೆ.

ಹೌದು, ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರ ಅತಿಥಿಯಾಗಿರುವ ನಟ ದರ್ಶನ್ ಅಂಡ್ ಗ್ಯಾಂಗ್ ಇಂದು ಕೋರ್ಟ್ ಮುಂದೆ ವಿಚಾರದಲ್ಲಿದ್ದಾರೆ. ಈಗಾಗಲೇ ಹತ್ತು ದಿನಗಳಿಂದ ಪೊಲೀಸ್ ಕಸ್ಟಡಿಯಲ್ಲಿರುವ ದರ್ಶನ್ ಅಂಡ್ ಗ್ಯಾಂಗಿಗೆ ಇಂದು ಮಹತ್ವದ ದಿನವಾಗಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಮರ್ಡರ್‌ ಕೇಸ್​​ನ ತನಿಖೆ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ಕಳೆದ 10 ದಿನಗಳಿಂದ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ ಅಂಡ್ ಗ್ಯಾಂಗ್​ಗೆ ಇಂದು ಪೊಲೀಸರು ಕೋರ್ಟ್​​ಗೆ ಹಾಜರುಪಡಿಸಲಿದ್ದಾರೆ. ನಟ ದರ್ಶನ್ ಜೈಲು ಸೇರ್ತಾರಾ ಅಥವಾ ನ್ಯಾಯಾಲಯ ಮತ್ತೆ ಪೊಲೀಸ್ ಕಸ್ಟಡಿಗೆ ನೀಡುತ್ತಾ ಅನ್ನೋದು ಕುತೂಹಲ ಮೂಡಿಸಿದೆ. ಇದನ್ನೂ ಓದಿ: ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಿಸುವಂತಿಲ್ಲ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಯೆಸ್…ಪವಿತ್ರಾಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದಕ್ಕೆ ಕೆರಳಿದ್ದ ದರ್ಶನ್ ಅಂಡ್ ಗ್ಯಾಂಗ್‌ಗೆ ಸಂಕಷ್ಟ ಎದುರಾಗಿದೆ. ಪ್ರಕರಣದ ತನಿಖೆ ಬಹುತೇಕ ಮುಗಿದಿದ್ದು, ನ್ಯಾಯಾಲಯದ ತೀರ್ಪಿನ ಮೇಲೆ ನಟ ದರ್ಶನ್ ತೂಗುದೀಪನ ಭವಿಷ್ಯ ತೂಗುಯ್ಯಾಲೆಯಲ್ಲಿ ತೂಗುತ್ತಿದೆ. ಕಳೆದ 10ದಿನಗಳಿಂದ

ಡಿ ಗ್ಯಾಂಗ್​​​ ಅನ್ನಪೂರ್ಣೇಶ್ವರಿ ನಗರ ಪೊಲೀಸರ ಕಸ್ಟಡಿಯಲ್ಲಿದ್ದಾರೆ. ಕಸ್ಟಡಿಯಲ್ಲಿರುವ 19 ಮಂದಿ ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯ ಆಗಲಿದ್ದು ಇವತ್ತು ಪೊಲೀಸರು ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

ಇಂದು ಆರೋಪಿಗಳನ್ನು ಏನಾದ್ರೂ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ರೆ ನಟ ದರ್ಶನ್​ ಜೈಲುಪಾಲಾಗಲಿದ್ದಾರೆ. 2ನೇ ಬಾರಿಗೆ ನಟ ದರ್ಶನ್​ ಜೈಲುಕಂಬಿ ಎಣಿಸಬೇಕಾಗಲಿದೆ. ಸಾರ್ವಜನಿಕ ಜೀವನದಲ್ಲಿ ಮಾದರಿಯಾಗಿ ನಡೆಯಬೇಕಿದ್ದ ನಟ ದರ್ಶನ್​ ಕೊಲೆ ಕೇಸ್​​ನಲ್ಲಿ ಜೈಲುಪಾಲಾಗುವ ಭೀತಿ ಎದುರಾಗಿದೆ. ನಟ ದರ್ಶನ್ ಭವಿಷ್ಯ ಏನಾಗಲಿದೆ ಅನ್ನೋದು ಭಾರಿ ಕುತೂಹಲಕ್ಕೆ ಕಾರಣ ಆಗಿದೆ.

Related