ವಿಮಾನ ನಿಲ್ದಾಣಕ್ಕೂ ತಟ್ಟಿದ ಬಂದ್‌ ಬಿಸಿ

ವಿಮಾನ ನಿಲ್ದಾಣಕ್ಕೂ ತಟ್ಟಿದ ಬಂದ್‌ ಬಿಸಿ

ಬೆಂಗಳೂರು,ಸೆ.29: ತಮಿಳುನಾಡಿಗೆ ಕಾವೇರಿ ನದಿಯಿಂದ ನೀರು ಹರಿಸುವುದನ್ನು ವಿರೋಧಿಸಿ ಕನ್ನಡ ಪರ ಸಂಘಟನೆಗಳು ಕರೆ ಕೊಟ್ಟಿದ್ದ ಅಖಂಡ ಕರ್ನಾಟಕ ಬಂದ್‍ಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಬಿಸಿ ತಟ್ಟಿದೆ. ಹೌದು ರಾಜ್ಯದಲ್ಲಿ ಕಾವೇರಿ ಕಿಚ್ಚು ಹೆಚ್ಚಾಗಿದ್ದು, ರಾಜ್ಯ ಪೂರ್ಣ ಸ್ತಬ್ಧವಾಗಿದ್ದು, ಪ್ರಯಾಣಿಕರಿಲ್ಲದೆ ದೆಹಲಿ,ಮುಂಬೈ,ಕೊಲ್ಕತ್ತಾ, ಮಂಗಳೂರು ಸೇರಿದಂತೆ ವಿವಿದೆಡೆಯಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಬೇಕಿದ್ದ ಒಟ್ಟು 22 ವಿಮಾನಗಳು ರದ್ದಾಗಿವೆ. ಇನ್ನು ಬೆಂಗಳೂರಿನಿಂದ ವಿವಿಧೆಡೆಗೆ ಹೋಗಬೇಕಿದ್ದ 22 ವಿಮಾನಗಳ ಹಾರಾಟ ರದ್ದುಗೊಳಿಸಲಾಗಿದೆ.

ಬಂದ್‍ಗೆ ಕರೆ ಕೊಟ್ಟಿದ್ದರಿಂದ ಯಾರು ಇಂದಿನ ದಿನಕ್ಕೆ ವಿಮಾನದ ಟಿಕೆಟ್ ಬುಕ್ ಮಡಿಕೊಂಡಿರಲಿಲ್ಲ. ಇನ್ನೂ ಕೆಲವರು ಬುಕ್ ಮಾಡಿದ್ದರೂ ವಿಮಾನ ನಿಲ್ದಾಣಕ್ಕೆ ಹೋಗಲು ವಾಹನಗಳು ಇಲ್ಲದಿದ್ದರಿಂದ ಕೊನೆ ಕ್ಷಣದಲ್ಲಿ ವಿಮಾನದ ಟಿಕೆಟ್ ರದ್ದು ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಯಾಣಿಕರಿಲ್ಲದೆ ಕೆಂಪೇಗೌಡ ಅಂತರಾಷ್ಟ್ರಿಯ ವಿಮಾನ ನಿಲ್ದಾಣ ಬಿಕೊ ಅನ್ನುತ್ತಿದೆ.

Related