ರಾಜ್ಯದ ಜನರಿಗೆ ಬಿಗ್‌ ಶಾಕ್‌ ಕೊಟ್ಟ ಸರ್ಕಾರ

ರಾಜ್ಯದ ಜನರಿಗೆ ಬಿಗ್‌ ಶಾಕ್‌ ಕೊಟ್ಟ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಮಳೆ ಇಲ್ಲದೆ ವಿಪರೀತ ಬರಗಾಲ ಕಾಡುತ್ತಿದ್ದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಜನರಿಗೆ ಶಾಪಿಂಗ್ ಸುದ್ದಿಯನ್ನು ನೀಡಿದೆ.

ಹೌದು ರಾಜ್ಯದಲ್ಲಿ ಈಗಾಗಲೇ ಬರಗಾಲ ಕಾಡುತ್ತಿದ್ದು ನೀರಿನ ಸಮಸ್ಯೆಯಿಂದ ರೈತರು ಕಂಗಲಾಗಿದ್ದಾರೆ. ಆದರೆ ರಾಜ್ಯ ಸರ್ಕಾರ ಕುಡಿಯುವ ನೀರಿನ ಬೆಲೆಯನ್ನು ಹೆಚ್ಚು ಮಾಡಿದೆ. ಇದರಿಂದ ರಾಜ್ಯದಲ್ಲಿರುವ ಜನರಿಗೆ ಬರಗಾಲದ ಸಂಕಷ್ಟದ ಜೊತೆಗೆ ಮತ್ತೆ ಕುಡಿಯುವ ನೀರಿನ ಸಂಕಷ್ಟ ಎದುರಾಗಿದೆ.

ಗೃಹ ಉಪಯೋಗ ಬಳಕೆ ನೀರಿನ ಮೇಲಿನ ತೆರಿಗೆ ಹೆಚ್ಚಳಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದ್ದು, ಜನರಿಗೆ ಕುಡಿಯುವ ನೀರು ದುಬಾರಿಯಾಗಲಿದೆ

ಕೈಗಾರಿಕೆಗಳಿಗೆ ನೀಡುವ ನೀರಿನ ಜೊತೆಗೆ ಗೃಹ ಬಳಕೆ ನೀರಿಗೂ ಟ್ಯಾಕ್ಸ್ ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ‌ ನೀಡಿದೆ. ಈ ಸಂಬಂಧ ಕರ್ನಾಟಕ ನೀರಾವರಿ ನಿಯಮಗಳು 1965 ಕ್ಕೆ ತಿದ್ದುಪಡಿಗೆ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಹೊಸ ತೆರಿಗೆ ಪ್ರಕಾರ ಗೃಹ ಬಳಕೆ ನೀರಿಗೆ ಪ್ರತಿ MCFTಗೆ (Million Cubic Feet) 320 ರೂ. ಟ್ಯಾಕ್ಸ್ ಹೆಚ್ಚಳವಾಗಲಿದೆ. ಅದರಂತೆ ಕೈಗಾರಿಕೆಗಳಿಗೆ ಪ್ರತಿ MCFT ಗೆ 3 ಲಕ್ಷ ರೂ. ಟ್ಯಾಕ್ಸ್ ಹೆಚ್ಚಳವಾಗಲಿದೆ

 

Related